ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಳಿ ವೇಳೆ ಕೋಟಿಗಟ್ಟಲೆ ನಗದು ಪತ್ತೆ

ನಿಜಾಮಾಬಾದ್ ಮುನ್ಸಿಪಲ್ ಸೂಪರಿಂಟೆಂಡೆಂಟ್ ಮನೆ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಈ ವೇಳೆ ಕೋಟಿಗಟ್ಟಲೆ ನಗದು ಪತ್ತೆಯಾಗಿದ್ದು, ಅದನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ದಾಸರಿ ನರೇಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ಪತ್ತೆಯಾಗಿದೆ. ನರೇಂದರ್ ವಿರುದ್ಧ ಅಕ್ರಮ ಆಸ್ತಿಗಾಗಿ ದಾಖಲಾದ ಪ್ರಕರಣದ ಭಾಗವಾಗಿ ನಡೆಸಿದ ದಾಳಿಯಲ್ಲಿ ಅವರ ಆದಾಯದ ಮೂಲಗಳನ್ನು ಮೀರಿದ ಆಸ್ತಿಯನ್ನು ಬಹಿರಂಗಪಡಿಸಲಾಗಿದೆ.

ಎಸಿಬಿ ಶೋಧದ ವೇಳೆ ಅಧಿಕಾರಿ ಮನೆಯಲ್ಲಿ 2.93 ಕೋಟಿ ನಗದು, ಅವರ ಪತ್ನಿ ಮತ್ತು ತಾಯಿ ಹೊಂದಿರುವ ಖಾತೆಗಳಲ್ಲಿ 1.10 ಕೋಟಿ ರೂ. 51 ತೊಲ ಚಿನ್ನ. 17 ಸ್ಥಿರಾಸ್ತಿಗಳು ಸೇರಿ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ.  6.07 ಕೋಟಿ ಆಗಿದೆ.

ದಾಳಿಯ ನಂತರ, ನರೇಂದರ್ ಅವರನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನಲ್ಲಿರುವ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಮುಂದುವರೆಸಿದೆ, ಹೆಚ್ಚುವರಿ ಆಸ್ತಿಯನ್ನು ಪತ್ತೆಹಚ್ಚಲು ಹೆಚ್ಚಿನ ಶೋಧ ನಡೆಯುತ್ತಿದೆ.

Ramesh Babu

Journalist

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

1 hour ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

11 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

12 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

14 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

15 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

18 hours ago