ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಳಿ ವೇಳೆ ಕೋಟಿಗಟ್ಟಲೆ ನಗದು ಪತ್ತೆ

ನಿಜಾಮಾಬಾದ್ ಮುನ್ಸಿಪಲ್ ಸೂಪರಿಂಟೆಂಡೆಂಟ್ ಮನೆ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಈ ವೇಳೆ ಕೋಟಿಗಟ್ಟಲೆ ನಗದು ಪತ್ತೆಯಾಗಿದ್ದು, ಅದನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ದಾಸರಿ ನರೇಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ಪತ್ತೆಯಾಗಿದೆ. ನರೇಂದರ್ ವಿರುದ್ಧ ಅಕ್ರಮ ಆಸ್ತಿಗಾಗಿ ದಾಖಲಾದ ಪ್ರಕರಣದ ಭಾಗವಾಗಿ ನಡೆಸಿದ ದಾಳಿಯಲ್ಲಿ ಅವರ ಆದಾಯದ ಮೂಲಗಳನ್ನು ಮೀರಿದ ಆಸ್ತಿಯನ್ನು ಬಹಿರಂಗಪಡಿಸಲಾಗಿದೆ.

ಎಸಿಬಿ ಶೋಧದ ವೇಳೆ ಅಧಿಕಾರಿ ಮನೆಯಲ್ಲಿ 2.93 ಕೋಟಿ ನಗದು, ಅವರ ಪತ್ನಿ ಮತ್ತು ತಾಯಿ ಹೊಂದಿರುವ ಖಾತೆಗಳಲ್ಲಿ 1.10 ಕೋಟಿ ರೂ. 51 ತೊಲ ಚಿನ್ನ. 17 ಸ್ಥಿರಾಸ್ತಿಗಳು ಸೇರಿ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ.  6.07 ಕೋಟಿ ಆಗಿದೆ.

ದಾಳಿಯ ನಂತರ, ನರೇಂದರ್ ಅವರನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನಲ್ಲಿರುವ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಮುಂದುವರೆಸಿದೆ, ಹೆಚ್ಚುವರಿ ಆಸ್ತಿಯನ್ನು ಪತ್ತೆಹಚ್ಚಲು ಹೆಚ್ಚಿನ ಶೋಧ ನಡೆಯುತ್ತಿದೆ.

Ramesh Babu

Journalist

Recent Posts

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

35 minutes ago

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

2 hours ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

9 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

10 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

11 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

21 hours ago