ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಳಿ ವೇಳೆ ಕೋಟಿಗಟ್ಟಲೆ ನಗದು ಪತ್ತೆ

ನಿಜಾಮಾಬಾದ್ ಮುನ್ಸಿಪಲ್ ಸೂಪರಿಂಟೆಂಡೆಂಟ್ ಮನೆ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಈ ವೇಳೆ ಕೋಟಿಗಟ್ಟಲೆ ನಗದು ಪತ್ತೆಯಾಗಿದ್ದು, ಅದನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ದಾಸರಿ ನರೇಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ಪತ್ತೆಯಾಗಿದೆ. ನರೇಂದರ್ ವಿರುದ್ಧ ಅಕ್ರಮ ಆಸ್ತಿಗಾಗಿ ದಾಖಲಾದ ಪ್ರಕರಣದ ಭಾಗವಾಗಿ ನಡೆಸಿದ ದಾಳಿಯಲ್ಲಿ ಅವರ ಆದಾಯದ ಮೂಲಗಳನ್ನು ಮೀರಿದ ಆಸ್ತಿಯನ್ನು ಬಹಿರಂಗಪಡಿಸಲಾಗಿದೆ.

ಎಸಿಬಿ ಶೋಧದ ವೇಳೆ ಅಧಿಕಾರಿ ಮನೆಯಲ್ಲಿ 2.93 ಕೋಟಿ ನಗದು, ಅವರ ಪತ್ನಿ ಮತ್ತು ತಾಯಿ ಹೊಂದಿರುವ ಖಾತೆಗಳಲ್ಲಿ 1.10 ಕೋಟಿ ರೂ. 51 ತೊಲ ಚಿನ್ನ. 17 ಸ್ಥಿರಾಸ್ತಿಗಳು ಸೇರಿ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ.  6.07 ಕೋಟಿ ಆಗಿದೆ.

ದಾಳಿಯ ನಂತರ, ನರೇಂದರ್ ಅವರನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನಲ್ಲಿರುವ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಮುಂದುವರೆಸಿದೆ, ಹೆಚ್ಚುವರಿ ಆಸ್ತಿಯನ್ನು ಪತ್ತೆಹಚ್ಚಲು ಹೆಚ್ಚಿನ ಶೋಧ ನಡೆಯುತ್ತಿದೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago