ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ದಾಳಿ ವೇಳೆ ಕೋಟಿಗಟ್ಟಲೆ ನಗದು ಪತ್ತೆ

ನಿಜಾಮಾಬಾದ್ ಮುನ್ಸಿಪಲ್ ಸೂಪರಿಂಟೆಂಡೆಂಟ್ ಮನೆ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. ಈ ವೇಳೆ ಕೋಟಿಗಟ್ಟಲೆ ನಗದು ಪತ್ತೆಯಾಗಿದ್ದು, ಅದನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಿಜಾಮಾಬಾದ್ ಮಹಾನಗರ ಪಾಲಿಕೆಯ ಅಧೀಕ್ಷಕ ಮತ್ತು ಪ್ರಭಾರಿ ಕಂದಾಯ ಅಧಿಕಾರಿ ದಾಸರಿ ನರೇಂದರ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ಪತ್ತೆಯಾಗಿದೆ. ನರೇಂದರ್ ವಿರುದ್ಧ ಅಕ್ರಮ ಆಸ್ತಿಗಾಗಿ ದಾಖಲಾದ ಪ್ರಕರಣದ ಭಾಗವಾಗಿ ನಡೆಸಿದ ದಾಳಿಯಲ್ಲಿ ಅವರ ಆದಾಯದ ಮೂಲಗಳನ್ನು ಮೀರಿದ ಆಸ್ತಿಯನ್ನು ಬಹಿರಂಗಪಡಿಸಲಾಗಿದೆ.

ಎಸಿಬಿ ಶೋಧದ ವೇಳೆ ಅಧಿಕಾರಿ ಮನೆಯಲ್ಲಿ 2.93 ಕೋಟಿ ನಗದು, ಅವರ ಪತ್ನಿ ಮತ್ತು ತಾಯಿ ಹೊಂದಿರುವ ಖಾತೆಗಳಲ್ಲಿ 1.10 ಕೋಟಿ ರೂ. 51 ತೊಲ ಚಿನ್ನ. 17 ಸ್ಥಿರಾಸ್ತಿಗಳು ಸೇರಿ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ.  6.07 ಕೋಟಿ ಆಗಿದೆ.

ದಾಳಿಯ ನಂತರ, ನರೇಂದರ್ ಅವರನ್ನು ಬಂಧಿಸಲಾಗಿದ್ದು, ಹೈದರಾಬಾದ್‌ನಲ್ಲಿರುವ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಮುಂದುವರೆಸಿದೆ, ಹೆಚ್ಚುವರಿ ಆಸ್ತಿಯನ್ನು ಪತ್ತೆಹಚ್ಚಲು ಹೆಚ್ಚಿನ ಶೋಧ ನಡೆಯುತ್ತಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

12 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

23 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

23 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago