ಯಲಹಂಕ: ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 1281 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಪದವಿ ಪಡೆದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಅವರಣದಲ್ಲಿ 12 ನೇ ಘಟಿಕೋತ್ಸವ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು, ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಕುಲಪತಿಗಳಾದ ಡಾ॥ವಿದ್ಯಾಶಂಕರ್ ಎಸ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ಎನ್,ಆರ್, ಶೆಟ್ಟಿ ಮತ್ತು ನಿಟ್ಟೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಭಾಗವಹಿಸಿದರು.
ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದೊಂದಿಗೆ ಪದವಿ ವಿತರಣೆ ಮಾಡಲಾಯಿತು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಚಂದ್ರಶೇಖರ್ ಎಲ್ ಪ್ರತಿಷ್ಠಿತ ನಿಟ್ಟೆ ಗುಲಾಬಿಶೆಟ್ಟಿ ಸ್ಮರಣಾರ್ಥ ಚಿನ್ನದ ಪದಕ ಪಡೆದರು, ಅತ್ಯುತ್ತಮ ವಿದ್ಯಾರ್ಥಿನಿಗೆ ಸಲ್ಲುವ ನಿಟ್ಟೆ ಮೀನಾಕ್ಷಿ ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕ ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಅಲಿನಿ ಕ್ರೈಸ್ಟ್ ಪೌಲ್ ಪಡೆದರು, ಅತ್ಯುತ್ತಮ ವಿದ್ಯಾರ್ಥಿಗೆ ಸಲ್ಲುವ ಜಸ್ಟಿಸ್ ಕೆ.ಎಸ್. ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕವನ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಕರಣ್ ಆರ್ ಪಡೆದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…