ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…