ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…