ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…