ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…