ದೊಡ್ಡಬಳ್ಳಾಪುರ, (ಏ.28); ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಪರಿಚಿತ ವ್ಯಕ್ತಿಯ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಮಾಧ್ಯಮ ವಕ್ತಾರ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿಯೋರ್ವರು ಯಶಸ್ವಿಯಾಗಿದ್ದಾರೆ.
ಸುಮಾರು 50 ಅಪರಿಚಿತ ವ್ಯಕ್ತಿ ಏಪ್ರಿಲ್ 26 ರಿಂದ ನಗರದ ಎಪಿಎಂಸಿ ಮಾರುಕಟ್ಟೆಯ ಬಳಿ ನಿತ್ರಾಣನಾಗಿ ಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ವಿಷಯ ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅವರ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಈ ಕುರಿತು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ರೂಪೇಶ್ ಯಾದವ್ ಅವರಿಗೆ ಕರೆ ಮೂಲಕ ಮಾಹಿತಿ ನೀಡಿದ್ದು, ಇಬ್ಬರ ಶ್ರಮದ ಪರಿಣಾಮ ಆತ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ.
ಸತತ ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಬಿದ್ದಿದ್ದ ವ್ಯಕ್ತಿ ಸಾವಿನ ಕದ ತಟ್ಟಿದ್ದು ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಅವರ ಜನ ಪರ ಕಾಳಜಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಲಿ ಸಿದ್ದನಾಗುತ್ತಿದ್ದನೆ.
ಮದ್ಯ ವ್ಯಸನದಿಂದಾಗಿ ನಗರದಲ್ಲಿ ಈ ರೀತಿ ಸಾವಿನ ಕದ ತಟ್ಟುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಕುಂಟನಹಳ್ಳಿ ಮಂಜುನಾಥ್ ಮತ್ತು ರೂಪೇಶ್ ಯಾದವ್ ಚಿಂತಿಸುತ್ತಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಸಂಘ ಸಂಸ್ಥೆಗಳ ನೆರವಿಗೆ ಪ್ರಯತ್ನ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…