ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಮಗುವೊಂದನ್ನು ವಾಮಾಚಾರಕ್ಕೆ ಬಲಿ ಕೊಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ತಮಾನ ವರದಿಯನ್ನು ಆಧರಿಸಿ ತಡರಾತ್ರಿ ಪ್ರಕರಣದಲ್ಲಿ ಭಾಗಿಯಾದ ಎ1 ಮತ್ತು ಎ4 ಆಪಾದಿತರಾದ ಸೈಯದ್ ಇಮ್ರಾನ್ ಮತ್ತು ಮಂಜುಳ ಇವರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಸಹಾಯವಾಣಿ-1098ಗೆ ಜನವರಿ 3ರಂದು ಬೆಳಗ್ಗೆ 11.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಪಟ್ಟಣದಲ್ಲಿ 01 ವರ್ಷದ ಗಂಡು ಮಗುವನ್ನು ವಾಮಾಚಾರಕ್ಕೆ ಬಲಿ ಕೂಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರಿಂದ ಅನಾಮಧೇಯವಾಗಿ ದೂರು ಸ್ವೀಕೃತವಾಗಿತ್ತು.
ಈ ದೂರನ್ನಾಧರಿಸಿ ಮಧ್ಯಾಹ್ನ 12.30 ಗಂಟೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಹೊಸಕೋಟೆ ಇವರು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸದರಿ ಸ್ಥಳದಲ್ಲಿ ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿ, ಸೂಲಿಬೆಲೆ ಪಟ್ಟಣದ ಜನತಾ ಕಾಲೋನಿಯಲ್ಲಿ ಸೈಯದ್ ಇಮ್ರಾನ್ ಮತ್ತು ನಜ್ಜಾ ಕೌಸರ್ ದಂಪತಿಗಳು ವಾಸವಾಗಿರುವುದು ಕಂಡು ಬಂದಿರುತ್ತದೆ.
ತದನಂತರ, ಪರಿಶೀಲಿಸಲಾಗಿ ಮನೆಯ ನೆಲ ಮಹಡಿ ಕೊಠಡಿಯಲ್ಲಿ ಗುಂಡಿ ಆಗೆದು ಪೂಜೆಗೆ ತಯಾರಿ ಮಾಡಿಕೊಂಡಿರುವುದು ಗಮನಿಸಲಾಗಿರುತ್ತದೆ. ಮಗುವು ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮಗುವನ್ನು ಕರೆತರುವಂತೆ ದಂಪತಿಗಳಿಗೆ ತಿಳಿಸಿದರೂ ಸಹ ಮಗುವನ್ನು ಕರೆತರಲು ಹಿಂದೇಟು ಹಾಕಿರುತ್ತಾರೆ. ತದನಂತರ ಕುಟುಂಬದ ಸದಸ್ಯರೊಬ್ಬರು ಮಗುವನ್ನು ಕರೆತಂದಿರುತ್ತಾರೆ. ಕೂಡಲೇ ಮಗುವನ್ನು ವಶಕ್ಕೆ ಪಡೆದು ರಕ್ಷಣೆ ಮತ್ತು ಪಾಲನೆ ಹಾಗೂ ಪೋಷಣೆಗಾಗಿ ಸರ್ಕಾರಿ ಶಿಶು ಮಂದಿರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವಶಕ್ಕೆ ನೀಡಲಾಗಿರುತ್ತದೆ.
ಮುಂದುವರೆದು, ಮಗುವಿನ ಬಗ್ಗೆ, ವಿಚಾರಿಸಲಾಗಿ, ಮಗುವು ಸೈಯದ್ ಇಮ್ರಾನ್ ಮತ್ತು ನಜ್ಞಾ ಕೌಸರ್ ದಂಪತಿಗಳ ಮಗುವಾಗಿರುವುದಿಲ್ಲ. ಕೂಲಂಕುಷವಾಗಿ ವಿಚಾರಿಸಿದಾಗ ಮಗುವು ಜೈವಿಕವಾಗಿ ಕೋಲಾರ ಮೂಲದ ಮಂಜುಳ ಮತ್ತು ರಾಮಪ್ಪ ದಂಪತಿಗಳಿಗೆ ಸೇರಿದ ಮಗುವಾಗಿರುತ್ತದೆ ಸದರಿ ಮಗುವನ್ನು 08 ತಿಂಗಳ ಹಿಂದೆ ದತ್ತು ಪಡೆಯಲಾಗಿದೆ ಎಂದು ತಿಳಿಸಿರುತ್ತಾರೆ.
ದತ್ತು ಪಕ್ರಿಯೆ ಕುರಿತು ಪರಿಶೀಲಿಸಲಾಗಿ ಸದರಿ ಮಗುವನ್ನು ಕಾನೂನು ಪ್ರಕಾರ ದತ್ತು ಪ್ರಕ್ರಿಯೆಗೆ ಒಳವಡಿಸದೆ ಕಾನೂನು ಬಾಹಿರವಾಗಿ ದತ್ತು ಪಡೆದಿರುವುದು ಕಂಡುಬಂದಿರುತ್ತದೆ.
ದಿನಾಂಕ:04.01.2026 ರಂದು ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಿ ಶಿಶು ಮಂದಿರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಿ ಮಗುವಿನ ಆರೋಗ್ಯದ ಬಗ್ಗೆ ವಿಚಾರಿಸಿ ನಿಯಮಾನುಸಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಮಗುವಿನ ರಕ್ಷಣೆ ಮತ್ತು ಪೋಷಣೆಗೆ ಅಗತ್ಯ ಕ್ರಮವಹಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಲು ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿರುತ್ತಾರೆ.
ಮುಂದುವರೆದು, ಮಗುವಿನ ಜೈವಿಕ ಪೋಷಕರಾದ ಮಂಜುಳ ಮತ್ತು ರಾಮಪ್ಪ ಇವರನ್ನು ವಿಚಾರಿಸಲಾಗಿ 02.04.2025 ರಂದು ಜಾಲಪ್ಪ ಆಸ್ಪತ್ರೆಯಲ್ಲಿ ಒಂದು ಗಂಡು ಮತ್ತು ಒಂದು ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದರಲ್ಲಿ ಗಂಡು ಮಗುವನ್ನು ಕಾನೂನು ಬಾಹಿರವಾಗಿ ಸೈಯದ್ ಇಮ್ರಾನ್ ಮತ್ತು ನಜಾ ಕೌಸರ್ ದಂಪತಿಗಳಿಗೆ ನೀಡಿರುವುದು ಕಂಡುಬಂದಿರುತ್ತದೆ.
ಪ್ರಕರಣದ ಕುರಿತಂತೆ, ದಿನಾಂಕ:04.1.01.2026 ರಂದು ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಮತ್ತು ಪ್ರಕರಣದಲ್ಲಿ ಭಾಗಿಯಾದ ಸೈಯದ್ ಇಮ್ರಾನ್, ನಮ್ಮಾ ಕೌಸರ್, ಜೈವಿಕ ಪೋಷಕರಾದ ರಾಮಪ್ಪ, ಮಂಜುಳ, ಮಗುವಿನ ಜನನ ಪತ್ರ ನೀಡಲು ಸಹಕರಿಸಿದ ಶ್ರೀರಂಗ ಆಸ್ಪತ್ರೆ ಸೂಲಿಬೆಲೆ, ಮುಖ್ಯ ನೊಂದಣಾಧಿಕಾರಿಗಳು ಸೂಲಿಬೆಲೆ ವೃತ್ತ ಹೊಸಕೋಟೆ, ದತ್ತು ಪತ್ರಕ್ಕೆ ಸಹಿ ಹಾಕಿರುವ ವಕೀಲರಾದ ಅಂಬರೀಶ್ ಹಾಗೂ ಮಗುವನ್ನು ನಿಧಿ ಅಸೆಗಾಗಿ ಬಲಿಕೊಡಲು ಯತ್ನಿಸಿದವರ ವಿರುದ್ಧ ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ದೂರನ್ನು ದಾಖಲಿಸಿರುತ್ತಾರೆ. ದೂರಿನ ಆಧಾರದ ಮೇಲೆ ದಿನಾಂಕ:04.01.2026 ರಂದು ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಎಫ್ಐಆರ್ ಸಂಖ್ಯೆ:02/2026 ಪ್ರಕರಣ ದಾಖಲಿಸಲಾಗಿದೆ.
*ಸಹಾಯವಾಣಿ 1098 ಸಂಪರ್ಕಿಸಿ*
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಹಾದಿ/ದಿಕ್ಕು ಬದಲಿಸಲು ಅನುವಾಗದಂತೆ ಹಾಗೂ ಯಾವುದೇ ರೀತಿಯ ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳು ಹಾಗೂ ಮಕ್ಕಳ ದತ್ತು ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ-1098, ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿನ ಮಮತೆಯ ತೊಟ್ಟಿಲನ್ನು ಸಾರ್ವಜನಿಕರು ಸಂಪರ್ಕಿಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…