ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಆಪಾದಿತರ ಮೇಲೆ ಕಾನೂನು ಕ್ರಮ

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಮಗುವೊಂದನ್ನು ವಾಮಾಚಾರಕ್ಕೆ ಬಲಿ ಕೊಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ತಮಾನ ವರದಿಯನ್ನು ಆಧರಿಸಿ ತಡರಾತ್ರಿ ಪ್ರಕರಣದಲ್ಲಿ ಭಾಗಿಯಾದ ಎ1 ಮತ್ತು ಎ4 ಆಪಾದಿತರಾದ ಸೈಯದ್ ಇಮ್ರಾನ್ ಮತ್ತು ಮಂಜುಳ ಇವರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಸಹಾಯವಾಣಿ-1098ಗೆ ಜನವರಿ 3ರಂದು ಬೆಳಗ್ಗೆ 11.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಪಟ್ಟಣದಲ್ಲಿ 01 ವರ್ಷದ ಗಂಡು ಮಗುವನ್ನು ವಾಮಾಚಾರಕ್ಕೆ ಬಲಿ ಕೂಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರಿಂದ ಅನಾಮಧೇಯವಾಗಿ ದೂರು ಸ್ವೀಕೃತವಾಗಿತ್ತು.

ಈ ದೂರನ್ನಾಧರಿಸಿ ಮಧ್ಯಾಹ್ನ 12.30 ಗಂಟೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಹೊಸಕೋಟೆ ಇವರು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸದರಿ ಸ್ಥಳದಲ್ಲಿ ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿ, ಸೂಲಿಬೆಲೆ ಪಟ್ಟಣದ ಜನತಾ ಕಾಲೋನಿಯಲ್ಲಿ ಸೈಯದ್ ಇಮ್ರಾನ್ ಮತ್ತು ನಜ್ಜಾ ಕೌಸರ್ ದಂಪತಿಗಳು ವಾಸವಾಗಿರುವುದು ಕಂಡು ಬಂದಿರುತ್ತದೆ.

ತದನಂತರ, ಪರಿಶೀಲಿಸಲಾಗಿ ಮನೆಯ ನೆಲ ಮಹಡಿ ಕೊಠಡಿಯಲ್ಲಿ ಗುಂಡಿ ಆಗೆದು ಪೂಜೆಗೆ ತಯಾರಿ ಮಾಡಿಕೊಂಡಿರುವುದು ಗಮನಿಸಲಾಗಿರುತ್ತದೆ. ಮಗುವು ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮಗುವನ್ನು ಕರೆತರುವಂತೆ ದಂಪತಿಗಳಿಗೆ ತಿಳಿಸಿದರೂ ಸಹ ಮಗುವನ್ನು ಕರೆತರಲು ಹಿಂದೇಟು ಹಾಕಿರುತ್ತಾರೆ. ತದನಂತರ ಕುಟುಂಬದ ಸದಸ್ಯರೊಬ್ಬರು ಮಗುವನ್ನು ಕರೆತಂದಿರುತ್ತಾರೆ. ಕೂಡಲೇ ಮಗುವನ್ನು ವಶಕ್ಕೆ ಪಡೆದು ರಕ್ಷಣೆ ಮತ್ತು ಪಾಲನೆ ಹಾಗೂ ಪೋಷಣೆಗಾಗಿ ಸರ್ಕಾರಿ ಶಿಶು ಮಂದಿರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವಶಕ್ಕೆ ನೀಡಲಾಗಿರುತ್ತದೆ.

ಮುಂದುವರೆದು, ಮಗುವಿನ ಬಗ್ಗೆ, ವಿಚಾರಿಸಲಾಗಿ, ಮಗುವು ಸೈಯದ್ ಇಮ್ರಾನ್ ಮತ್ತು ನಜ್ಞಾ ಕೌಸರ್ ದಂಪತಿಗಳ ಮಗುವಾಗಿರುವುದಿಲ್ಲ. ಕೂಲಂಕುಷವಾಗಿ ವಿಚಾರಿಸಿದಾಗ ಮಗುವು ಜೈವಿಕವಾಗಿ ಕೋಲಾರ ಮೂಲದ ಮಂಜುಳ ಮತ್ತು ರಾಮಪ್ಪ ದಂಪತಿಗಳಿಗೆ ಸೇರಿದ ಮಗುವಾಗಿರುತ್ತದೆ ಸದರಿ ಮಗುವನ್ನು 08 ತಿಂಗಳ ಹಿಂದೆ ದತ್ತು ಪಡೆಯಲಾಗಿದೆ ಎಂದು ತಿಳಿಸಿರುತ್ತಾರೆ.

ದತ್ತು ಪಕ್ರಿಯೆ ಕುರಿತು ಪರಿಶೀಲಿಸಲಾಗಿ ಸದರಿ ಮಗುವನ್ನು ಕಾನೂನು ಪ್ರಕಾರ ದತ್ತು ಪ್ರಕ್ರಿಯೆಗೆ ಒಳವಡಿಸದೆ ಕಾನೂನು ಬಾಹಿರವಾಗಿ ದತ್ತು ಪಡೆದಿರುವುದು ಕಂಡುಬಂದಿರುತ್ತದೆ.

ದಿನಾಂಕ:04.01.2026 ರಂದು ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಿ ಶಿಶು ಮಂದಿರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಿ ಮಗುವಿನ ಆರೋಗ್ಯದ ಬಗ್ಗೆ ವಿಚಾರಿಸಿ ನಿಯಮಾನುಸಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಮಗುವಿನ ರಕ್ಷಣೆ ಮತ್ತು ಪೋಷಣೆಗೆ ಅಗತ್ಯ ಕ್ರಮವಹಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಲು ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಮುಂದುವರೆದು, ಮಗುವಿನ ಜೈವಿಕ ಪೋಷಕರಾದ ಮಂಜುಳ ಮತ್ತು ರಾಮಪ್ಪ ಇವರನ್ನು ವಿಚಾರಿಸಲಾಗಿ 02.04.2025 ರಂದು ಜಾಲಪ್ಪ ಆಸ್ಪತ್ರೆಯಲ್ಲಿ ಒಂದು ಗಂಡು ಮತ್ತು ಒಂದು ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದರಲ್ಲಿ ಗಂಡು ಮಗುವನ್ನು ಕಾನೂನು ಬಾಹಿರವಾಗಿ ಸೈಯದ್ ಇಮ್ರಾನ್ ಮತ್ತು ನಜಾ ಕೌಸರ್ ದಂಪತಿಗಳಿಗೆ ನೀಡಿರುವುದು ಕಂಡುಬಂದಿರುತ್ತದೆ.

ಪ್ರಕರಣದ ಕುರಿತಂತೆ, ದಿನಾಂಕ:04.1.01.2026 ರಂದು ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಮತ್ತು ಪ್ರಕರಣದಲ್ಲಿ ಭಾಗಿಯಾದ ಸೈಯದ್ ಇಮ್ರಾನ್, ನಮ್ಮಾ ಕೌಸರ್, ಜೈವಿಕ ಪೋಷಕರಾದ ರಾಮಪ್ಪ, ಮಂಜುಳ, ಮಗುವಿನ ಜನನ ಪತ್ರ ನೀಡಲು ಸಹಕರಿಸಿದ ಶ್ರೀರಂಗ ಆಸ್ಪತ್ರೆ ಸೂಲಿಬೆಲೆ, ಮುಖ್ಯ ನೊಂದಣಾಧಿಕಾರಿಗಳು ಸೂಲಿಬೆಲೆ ವೃತ್ತ ಹೊಸಕೋಟೆ, ದತ್ತು ಪತ್ರಕ್ಕೆ ಸಹಿ ಹಾಕಿರುವ ವಕೀಲರಾದ ಅಂಬರೀಶ್ ಹಾಗೂ ಮಗುವನ್ನು ನಿಧಿ ಅಸೆಗಾಗಿ ಬಲಿಕೊಡಲು ಯತ್ನಿಸಿದವರ ವಿರುದ್ಧ ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ದೂರನ್ನು ದಾಖಲಿಸಿರುತ್ತಾರೆ. ದೂರಿನ ಆಧಾರದ ಮೇಲೆ ದಿನಾಂಕ:04.01.2026 ರಂದು ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಎಫ್ಐಆರ್ ಸಂಖ್ಯೆ:02/2026 ಪ್ರಕರಣ ದಾಖಲಿಸಲಾಗಿದೆ.

*ಸಹಾಯವಾಣಿ 1098 ಸಂಪರ್ಕಿಸಿ*
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಹಾದಿ/ದಿಕ್ಕು ಬದಲಿಸಲು ಅನುವಾಗದಂತೆ ಹಾಗೂ ಯಾವುದೇ ರೀತಿಯ ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳು ಹಾಗೂ ಮಕ್ಕಳ ದತ್ತು ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ-1098, ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿನ ಮಮತೆಯ ತೊಟ್ಟಿಲನ್ನು ಸಾರ್ವಜನಿಕರು ಸಂಪರ್ಕಿಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

2 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

7 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

8 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

8 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

10 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

11 hours ago