ನಿಧಿಗಾಗಿ ಮಗು ಬಲಿ ಯತ್ನ ಪ್ರಕರಣ: ಆಪಾದಿತರ ಮೇಲೆ ಕಾನೂನು ಕ್ರಮ

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಮಗುವೊಂದನ್ನು ವಾಮಾಚಾರಕ್ಕೆ ಬಲಿ ಕೊಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ತಮಾನ ವರದಿಯನ್ನು ಆಧರಿಸಿ ತಡರಾತ್ರಿ ಪ್ರಕರಣದಲ್ಲಿ ಭಾಗಿಯಾದ ಎ1 ಮತ್ತು ಎ4 ಆಪಾದಿತರಾದ ಸೈಯದ್ ಇಮ್ರಾನ್ ಮತ್ತು ಮಂಜುಳ ಇವರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಸಹಾಯವಾಣಿ-1098ಗೆ ಜನವರಿ 3ರಂದು ಬೆಳಗ್ಗೆ 11.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಸೂಲಿಬೆಲೆ ಪಟ್ಟಣದಲ್ಲಿ 01 ವರ್ಷದ ಗಂಡು ಮಗುವನ್ನು ವಾಮಾಚಾರಕ್ಕೆ ಬಲಿ ಕೂಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರಿಂದ ಅನಾಮಧೇಯವಾಗಿ ದೂರು ಸ್ವೀಕೃತವಾಗಿತ್ತು.

ಈ ದೂರನ್ನಾಧರಿಸಿ ಮಧ್ಯಾಹ್ನ 12.30 ಗಂಟೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಹೊಸಕೋಟೆ ಇವರು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮತ್ತು ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸದರಿ ಸ್ಥಳದಲ್ಲಿ ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿ, ಸೂಲಿಬೆಲೆ ಪಟ್ಟಣದ ಜನತಾ ಕಾಲೋನಿಯಲ್ಲಿ ಸೈಯದ್ ಇಮ್ರಾನ್ ಮತ್ತು ನಜ್ಜಾ ಕೌಸರ್ ದಂಪತಿಗಳು ವಾಸವಾಗಿರುವುದು ಕಂಡು ಬಂದಿರುತ್ತದೆ.

ತದನಂತರ, ಪರಿಶೀಲಿಸಲಾಗಿ ಮನೆಯ ನೆಲ ಮಹಡಿ ಕೊಠಡಿಯಲ್ಲಿ ಗುಂಡಿ ಆಗೆದು ಪೂಜೆಗೆ ತಯಾರಿ ಮಾಡಿಕೊಂಡಿರುವುದು ಗಮನಿಸಲಾಗಿರುತ್ತದೆ. ಮಗುವು ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮಗುವನ್ನು ಕರೆತರುವಂತೆ ದಂಪತಿಗಳಿಗೆ ತಿಳಿಸಿದರೂ ಸಹ ಮಗುವನ್ನು ಕರೆತರಲು ಹಿಂದೇಟು ಹಾಕಿರುತ್ತಾರೆ. ತದನಂತರ ಕುಟುಂಬದ ಸದಸ್ಯರೊಬ್ಬರು ಮಗುವನ್ನು ಕರೆತಂದಿರುತ್ತಾರೆ. ಕೂಡಲೇ ಮಗುವನ್ನು ವಶಕ್ಕೆ ಪಡೆದು ರಕ್ಷಣೆ ಮತ್ತು ಪಾಲನೆ ಹಾಗೂ ಪೋಷಣೆಗಾಗಿ ಸರ್ಕಾರಿ ಶಿಶು ಮಂದಿರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವಶಕ್ಕೆ ನೀಡಲಾಗಿರುತ್ತದೆ.

ಮುಂದುವರೆದು, ಮಗುವಿನ ಬಗ್ಗೆ, ವಿಚಾರಿಸಲಾಗಿ, ಮಗುವು ಸೈಯದ್ ಇಮ್ರಾನ್ ಮತ್ತು ನಜ್ಞಾ ಕೌಸರ್ ದಂಪತಿಗಳ ಮಗುವಾಗಿರುವುದಿಲ್ಲ. ಕೂಲಂಕುಷವಾಗಿ ವಿಚಾರಿಸಿದಾಗ ಮಗುವು ಜೈವಿಕವಾಗಿ ಕೋಲಾರ ಮೂಲದ ಮಂಜುಳ ಮತ್ತು ರಾಮಪ್ಪ ದಂಪತಿಗಳಿಗೆ ಸೇರಿದ ಮಗುವಾಗಿರುತ್ತದೆ ಸದರಿ ಮಗುವನ್ನು 08 ತಿಂಗಳ ಹಿಂದೆ ದತ್ತು ಪಡೆಯಲಾಗಿದೆ ಎಂದು ತಿಳಿಸಿರುತ್ತಾರೆ.

ದತ್ತು ಪಕ್ರಿಯೆ ಕುರಿತು ಪರಿಶೀಲಿಸಲಾಗಿ ಸದರಿ ಮಗುವನ್ನು ಕಾನೂನು ಪ್ರಕಾರ ದತ್ತು ಪ್ರಕ್ರಿಯೆಗೆ ಒಳವಡಿಸದೆ ಕಾನೂನು ಬಾಹಿರವಾಗಿ ದತ್ತು ಪಡೆದಿರುವುದು ಕಂಡುಬಂದಿರುತ್ತದೆ.

ದಿನಾಂಕ:04.01.2026 ರಂದು ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸರ್ಕಾರಿ ಶಿಶು ಮಂದಿರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಿ ಮಗುವಿನ ಆರೋಗ್ಯದ ಬಗ್ಗೆ ವಿಚಾರಿಸಿ ನಿಯಮಾನುಸಾರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಮಗುವಿನ ರಕ್ಷಣೆ ಮತ್ತು ಪೋಷಣೆಗೆ ಅಗತ್ಯ ಕ್ರಮವಹಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಲು ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಮುಂದುವರೆದು, ಮಗುವಿನ ಜೈವಿಕ ಪೋಷಕರಾದ ಮಂಜುಳ ಮತ್ತು ರಾಮಪ್ಪ ಇವರನ್ನು ವಿಚಾರಿಸಲಾಗಿ 02.04.2025 ರಂದು ಜಾಲಪ್ಪ ಆಸ್ಪತ್ರೆಯಲ್ಲಿ ಒಂದು ಗಂಡು ಮತ್ತು ಒಂದು ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇದರಲ್ಲಿ ಗಂಡು ಮಗುವನ್ನು ಕಾನೂನು ಬಾಹಿರವಾಗಿ ಸೈಯದ್ ಇಮ್ರಾನ್ ಮತ್ತು ನಜಾ ಕೌಸರ್ ದಂಪತಿಗಳಿಗೆ ನೀಡಿರುವುದು ಕಂಡುಬಂದಿರುತ್ತದೆ.

ಪ್ರಕರಣದ ಕುರಿತಂತೆ, ದಿನಾಂಕ:04.1.01.2026 ರಂದು ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಮತ್ತು ಪ್ರಕರಣದಲ್ಲಿ ಭಾಗಿಯಾದ ಸೈಯದ್ ಇಮ್ರಾನ್, ನಮ್ಮಾ ಕೌಸರ್, ಜೈವಿಕ ಪೋಷಕರಾದ ರಾಮಪ್ಪ, ಮಂಜುಳ, ಮಗುವಿನ ಜನನ ಪತ್ರ ನೀಡಲು ಸಹಕರಿಸಿದ ಶ್ರೀರಂಗ ಆಸ್ಪತ್ರೆ ಸೂಲಿಬೆಲೆ, ಮುಖ್ಯ ನೊಂದಣಾಧಿಕಾರಿಗಳು ಸೂಲಿಬೆಲೆ ವೃತ್ತ ಹೊಸಕೋಟೆ, ದತ್ತು ಪತ್ರಕ್ಕೆ ಸಹಿ ಹಾಕಿರುವ ವಕೀಲರಾದ ಅಂಬರೀಶ್ ಹಾಗೂ ಮಗುವನ್ನು ನಿಧಿ ಅಸೆಗಾಗಿ ಬಲಿಕೊಡಲು ಯತ್ನಿಸಿದವರ ವಿರುದ್ಧ ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ದೂರನ್ನು ದಾಖಲಿಸಿರುತ್ತಾರೆ. ದೂರಿನ ಆಧಾರದ ಮೇಲೆ ದಿನಾಂಕ:04.01.2026 ರಂದು ಪೊಲೀಸ್ ಠಾಣೆ ಹೊಸಕೋಟೆ ಉಪವಿಭಾಗ ಇಲ್ಲಿ ಎಫ್ಐಆರ್ ಸಂಖ್ಯೆ:02/2026 ಪ್ರಕರಣ ದಾಖಲಿಸಲಾಗಿದೆ.

*ಸಹಾಯವಾಣಿ 1098 ಸಂಪರ್ಕಿಸಿ*
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಹಾದಿ/ದಿಕ್ಕು ಬದಲಿಸಲು ಅನುವಾಗದಂತೆ ಹಾಗೂ ಯಾವುದೇ ರೀತಿಯ ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳು ಹಾಗೂ ಮಕ್ಕಳ ದತ್ತು ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿ-1098, ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿನ ಮಮತೆಯ ತೊಟ್ಟಿಲನ್ನು ಸಾರ್ವಜನಿಕರು ಸಂಪರ್ಕಿಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

43 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago