ನಿಧಿ ಕಳ್ಳರ ಹಾವಳಿ: ಮುಂದುವರಿದ ಪುರಾತನ ದೇವಾಲಯಗಳ ಹಾನಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ  ಶ್ರೀ ಬೆನಕಪ್ಪ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆಯ ದಿನ ವಾಮಾಚಾರ ಮಾಡಿ

ನಿಧಿ ಕಳ್ಳರು ಪುರಾತನ ಛತ್ರ ವಿರೂಪಗೊಳಿಸಿ ಹಳ್ಳ ತೋಡಿ ಹುಡುಕಾಟ ನಡೆಸಿರುವ ಘಟನೆ ನಡೆದಿದೆ.

ನಿರ್ಜನ ಪ್ರದೇಶದಲ್ಲಿರುವ ಬೆನಕಪ್ಪ ದೇವಾಲಯದ ಛತ್ರದಲ್ಲಿ ನಿಧಿ ಶೋಧಕ್ಕಾಗಿ ದಿಗ್ಭಂಧನ, ಪೂಜೆ, ಮಾಟ, ಮಂತ್ರ ಮಾಡಲಾಗಿದೆ.

ಗುಂಡಿ ತೋಡಿ ಕುಡಿಕೆ, ಅರಿಶಿಣ, ಕುಂಕುಮ ಹಾಗೂ ವಾಮಾಚಾರಕ್ಕೆ ಬಳಸುವ ವಸ್ತುಗಳನ್ನು ಉಪಯೋಗಿಸಿ ಶೋಧಕಾರ್ಯ ನಡೆಸಿದ್ದಾರೆ. ಈ ಘಟನೆಯಿಂದ ದೇವಾಲಯದ ಬಳಿ ಗ್ರಾಮಸ್ಥರು ತೆರಳು ಭಯ ಭೀತರಾಗಿದ್ದಾರೆ.

ಸರ್ಕಾರ ನಿರ್ಜನ ಪ್ರದೇಶದಲ್ಲಿರುವ ದೇವಸ್ಥಾನಗಳಿಗೆ ಸೂಕ್ತ ಭದ್ರತೆ ಹೊದಗಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ‌.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

9 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

9 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

21 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago