Categories: ಲೇಖನ

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 – 30 ರ ಸಮಯ…….

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಹೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ.

ದ್ವೇಷ, ಅಸೂಯೆ, ಸೈದ್ಧಾಂತಿಕ ನಿಲುವು, ರಾಜಕೀಯ ಎಲ್ಲವನ್ನು ಮೀರಿ ಇದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ…..

ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು…….

ಕ್ಷಣಕ್ಷಣಕ್ಕೂ ಬದಲಾಗುತ್ತಾ ವಿಶಾಲ ಸಾಗರದ ಅಲೆಗಳಂತೆ ,
ಎತ್ತರದ ಪರ್ವತಗಳ ನೋಟದಂತೆ
ದಟ್ಟ ಕಾನನದ ಮಾಲೆಗಳಂತೆ,
ಅನಂತ ಆಕಾಶದ ಕೌತುಕದಂತೆ,
ಚಲಿಸುತ್ತಲೇ ಇರುತ್ತದೆ‌.

ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳು ಇರುವಂತೆ,
ಪ್ರೀತಿ, ಪ್ರೇಮ, ಕರುಣೆ, ಕ್ಷಮೆ, ಮಮತೆಗಳೆಂಬ ಭಾವಗಳೂ ತುಂಬಿ ತುಳುಕುತ್ತವೆ….

ಇಲ್ಲಿ ನಾವು ಮಾಡಬೇಕಿರುವುದು ಹೆಚ್ಚೇನೂ ಇಲ್ಲ.

ಎಲ್ಲ ಭಾವಗಳಲ್ಲೂ ಸಂಚರಿಸುತ್ತಾ ಪ್ರೀತಿ ಎಂಬ ಭಾವವನ್ನು ಅಪ್ಪಿಕೊಳ್ಳೋಣ…..

ಪ್ರೀತಿ ಎಂಬ ಭಾವದಲ್ಲಿ ಸ್ಥಾಯಿಯಾಗೋಣ.
ಅದೊಂದು ಅದ್ಬುತ ಪ್ರಪಂಚ.

ಬೇರೆ ಎಲ್ಲಾ ಭಾವಗಳಿಗೂ ಅಧಿಪತಿ ಈ ಪ್ರೀತಿ ಎಂಬ ಭಾವ. ಇದು ಎಂದೆಂದಿಗೂ ಮುಗಿಯದ ಅಕ್ಷಯ ಭಾವ.

ನಿಷ್ಕಲ್ಮಶ ಪ್ರೀತಿಗೆ ಯಾವ ಮಿತಿಯೂ ಇಲ್ಲ. ಹರಿಯಲು ಬಿಡಿ ಪ್ರೀತಿಯನ್ನು….

ಅದು ಮತ್ತಷ್ಟು ವಿಶಾಲವಾಗುತ್ತಾ ಸಾಗುತ್ತದೆ. ನಿರೀಕ್ಷೆಗಳಿಲ್ಲದ ,
ಸ್ವಾರ್ಥವಿಲ್ಲದ ಪ್ರೀತಿ ನಿಮ್ಮನ್ನು ಆಂತರಿಕವಾಗಿ ಎತ್ತರೆತ್ತರಕ್ಕೆ ಕೊಂಡೊಯ್ಯುತ್ತದೆ.

ಪ್ರೀತಿ ಎಂಬ ಭಾವ ಎಲ್ಲಾ ಸಂಬಂಧಗಳನ್ನು ಮೀರಿ ಬದುಕನ್ನು ಸಾರ್ಥಕತೆಯತ್ತಾ ಮುನ್ನಡೆಸುತ್ತದೆ.

ಸಾಮಾನ್ಯ ವ್ಯಾವಹಾರಿಕ ಬದುಕಿನಲ್ಲಿ ಇದು ಅತ್ಯಂತ ಕಠಿಣ.
ಆದರೆ,
ಅಸಾಮಾನ್ಯರಾಗಲು ಅಸಾಧ್ಯವಾದುದನ್ನೇ ಸಾಧಿಸಬೇಕಲ್ಲವೇ ?

ದೇಶದ ಹಿತಾಸಕ್ತಿಯಿಂದ ಪ್ರಯತ್ನಿಸಿ ಇಂದಿನಿಂದಲೇ, ನೀವಿರುವ ನೆಲೆಯಲ್ಲಿಯೇ..
ಇದರಿಂದ ಯಾವ ದುಷ್ಪರಿಣಾಮಗಳು ಇಲ್ಲವೆಂಬ ಖಚಿತ ಭರವಸೆ ನೀಡಬಲ್ಲೆ ಮಾನ್ಯ ನರೇಂದ್ರ ಮೋದಿ ಅವರೇ…

ಏಕೆಂದರೆ,

“ಸಮಾಜದ ಕಟ್ಟಕಡೆಯ ವ್ಯಕ್ತಿ, ಸ್ವಾತಂತ್ರ್ಯ ಮತ್ತು ಸಾಮಾಜಿಕ ವ್ಯವಸ್ಥೆ ” ಎಂಬ ಅಪ್ರಕಟಿತ ಕೃತಿಯಲ್ಲಿ ಮತ್ತು ಅದನ್ನು ಬರೆಯುವಾಗ ತಿಳಿದ ಕೆಲವು ಅನುಭವಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ಕೇಳಲು, ಓದಲು ಹಿಂಸೆಯಾದರೆ ಕ್ಷಮೆ ಇರಲಿ.

ರಸ್ತೆ ಬದಿಯಲ್ಲಿ ಅನಾಥರಂತೆ ಸಾಯುವ ಮಾಹಿತಿಯೇ ಇಲ್ಲದ ಬಹಳಷ್ಟು ಜನರನ್ನು ಬಿಹಾರದಲ್ಲಿ ನೋಡಿದೆ.

ತನ್ನ ಕುಟುಂಬದವರ ಎರಡೊತ್ತಿನ ಊಟಕ್ಕಾಗಿ 5/6 ಜನ ವಿಟ ಪುರುಷರಿಗೆ ತನ್ನ ಮುದಿ ದೇಹವನ್ನು ಮಾರಿಕೊಂಡ ಹೆಣ್ಣನ್ನು ಅಸ್ಸಾಮಿನಲ್ಲಿ ಭೇಟಿಯಾದೆ.

ಇನ್ನೂ ಟಿವಿ ಎಂದರೆ ಏನೆಂದು ತಿಳಿಯದ ಜನರನ್ನು ನಾಗಾ ಲ್ಯಾಂಡ್ ನಲ್ಲಿ ಕಂಡೆ.

ಹಣಕ್ಕಾಗಿ ತಮ್ಮ ಕಿಡ್ನಿಯನ್ನೇ ಬೇಗ ಮಾರಿಸಿಕೊಡಲು ದಲ್ಲಾಳಿಗಳಿಗೆ ದಂಬಾಲು ಬಿದ್ದು ಲಂಚ ಕೊಡುವ ಹಳ್ಳಿ ಯೊಂದನ್ನು ಜಾರ್ಖಂಡ್ ನಲ್ಲಿ ಗಮನಿಸಿದೆ.

ಹಣಕ್ಕಾಗಿ ಮಕ್ಕಳನ್ನು ಹೆತ್ತು ಮಾರುವ ಒಂದು ಗ್ರಾಮವೇ ಒರಿಸ್ಸಾದಲ್ಲಿದೆ.

ತಮ್ಮ ಮನೆಯಲ್ಲಿಯೇ ತಾಯಿ, ಹೆಂಡತಿ, ಅಕ್ಕ, ತಂಗಿಯರನ್ನು ಇಟ್ಟುಕೊಂಡು ವೇಶ್ಯಾಗೃಹ ನಡೆಸುವ ಅನೇಕ ಊರುಗಳು ಆಂಧ್ರ ಪ್ರದೇಶದಲ್ಲಿ ಇವೆ.

ಮಕ್ಕಳನ್ನು ಕದ್ದು ಅವರ ಕಣ್ಣುಕಿತ್ತು ಅಥವಾ ಅಂಗವಿಕಲರನ್ನಾಗಿ ಮಾಡಿ ಅವರಿಂದ ಭಿಕ್ಷೆ ಬೇಡಿಸಿ ಜೀವಿಸುವ ಕೆಲವು ಕುಟುಂಬಗಳು
ಛತ್ತೀಸ್ ಗಡದಲ್ಲಿವೆ.

ಇಡೀ ಜೀವನವನ್ನೇ ಕುಟುಂಬ ಸಮೇತ ರಸ್ತೆಯ ಬದಿಯಲ್ಲಿಯೇ ಕಳೆದ ಸಂಸಾರಗಳನ್ನು ಮುಂಬೈನಲ್ಲಿ ಮಾತನಾಡಿಸಿದೆ.

ಹುಟ್ಟಿಸಿದ ತಂದೆ ತಾಯಿಯನ್ನೇ ಅನುಕೂಲಸ್ತ ಮಗನೊಬ್ಬ ಹೆಂಡತಿಯ ಮಾತು ಕೇಳಿ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಭಿಕ್ಷಾಟನೆ ಮಾಡುತ್ತಿದ್ದ ಅಪರಾಧಿಗಳೆಂದು ಸುಳ್ಳು ಹೇಳಿ ಸೇರಿಸಿದ ಪ್ರಕರಣಕ್ಕೆ ಕರ್ನಾಟಕದಲ್ಲಿ ನಾನೇ ಖುದ್ದು ಸಾಕ್ಷೀದಾರ.

ಪ್ರಧಾನಿ, ಮುಖ್ಯಮಂತ್ರಿ ಇರಲಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವಿದ್ದೇವೆ ಎಂಬ ಅರಿವೇ ಇರದ ಬಹಳಷ್ಟು ಜನರನ್ನು ಉತ್ತರಪ್ರದೇಶದಲ್ಲಿ ಮಾತನಾಡಿಸಿದೆ.

ಇದು ಕೆಲವು ಉದಾಹರಣೆಗಳು ಅಷ್ಟೆ. ಮುಂದೊಮ್ಮೆ ಬಹಳಷ್ಟು ಹೃದಯ ಬಿರಿಯುವ ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ.

ಇನ್ನೂ,
ಕಳ್ಳತನ, ಸುಳ್ಳು, ವಂಚನೆಗಳನ್ನೇ ವೃತ್ತಿ ಮಾಡಿಕೊಂಡಿರುವ ಅನೇಕರನ್ನು ದೇಶದ ಎಲ್ಲಾ ವಿಧಾನ ಮಂಡಲ ಮತ್ತು ಸಂಸತ್ತಿನಲ್ಲಿ ಕಂಡೆ ಎಂದು ನಿಮಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲವಲ್ಲ.

ವಿಶ್ವಗುರು ಭಾರತ ಎನ್ನುವ ನಾವು ಇದನ್ನೂ ಗಮನಿಸಬೇಕಲ್ಲವೇ.
ಸಂವೇದನೆಗಳೇ ಇಲ್ಲದ ಈ ವ್ಯವಸ್ಥೆಯ ಬಗ್ಗೆ ಆಕ್ರೋಶ ಉಂಟಾಗುತ್ತದೆ.
ಬದಲಾವಣೆ ಕೆಳ ಮಟ್ಟದಿಂದ ಆಗಬೇಕಿದೆ. ಇದರಲ್ಲಿ ನಮ್ಮೆಲ್ಲರ ಜವಾಬ್ದಾರಿಯೂ ಇದೆ. ಅದನ್ನು ನಿಭಾಯಿಸಲು ಸಿದ್ದರಾಗೋಣ.

ನಿನ್ನೆ ಮಾನ್ಯ ನರೇಂದ್ರ ಮೋದಿಯವರ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು. ಏಕೆಂದರೆ ದೇಶದ ಮುಖ್ಯಸ್ಥರು ತುಂಬಾ ಸೂಕ್ಷ್ಮವಾಗಿ, ಸಂವೇದನೆಯಿಂದ, ಸಂಯಮದಿಂದ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಹೊಂದಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಬಹುದೊಡ್ಡ ಜವಾಬ್ದಾರಿಯನ್ನು ಅರಿತು ಮಾತನಾಡಬೇಕು ಎಂಬ ನಿರೀಕ್ಷೆ ನಮ್ಮದು. ಸಾಮಾನ್ಯ ವ್ಯಕ್ತಿಯಂತೆ ಹಗುರವಾಗಿ ಮಾತನಾಡಿದರೆ ಅದು ಅವರ ಘನತೆಗೆ ಕುಂದು. ಉಳಿದದ್ದು ಅವರವರ ವಿವೇಚನೆಗೆ ಬಿಡುತ್ತಾ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago