Categories: ಲೇಖನ

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 – 30 ರ ಸಮಯ…….

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ ನೇರ ಪ್ರಸಾರದ ಭಾಷಣ ಹೇಳಿದ ಮೇಲೆ ನನ್ನಲ್ಲಿ ಉಂಟಾದ ಕೆಲವು ಭಾವನೆಗಳು ಈ ರೀತಿ ಇದೆ.

ದ್ವೇಷ, ಅಸೂಯೆ, ಸೈದ್ಧಾಂತಿಕ ನಿಲುವು, ರಾಜಕೀಯ ಎಲ್ಲವನ್ನು ಮೀರಿ ಇದನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ…..

ಅಗಾಧ ಭಾವನೆಗಳ ಅಕ್ಷಯ ಪಾತ್ರೆ ನಮ್ಮ ಮನಸ್ಸು…….

ಕ್ಷಣಕ್ಷಣಕ್ಕೂ ಬದಲಾಗುತ್ತಾ ವಿಶಾಲ ಸಾಗರದ ಅಲೆಗಳಂತೆ ,
ಎತ್ತರದ ಪರ್ವತಗಳ ನೋಟದಂತೆ
ದಟ್ಟ ಕಾನನದ ಮಾಲೆಗಳಂತೆ,
ಅನಂತ ಆಕಾಶದ ಕೌತುಕದಂತೆ,
ಚಲಿಸುತ್ತಲೇ ಇರುತ್ತದೆ‌.

ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳು ಇರುವಂತೆ,
ಪ್ರೀತಿ, ಪ್ರೇಮ, ಕರುಣೆ, ಕ್ಷಮೆ, ಮಮತೆಗಳೆಂಬ ಭಾವಗಳೂ ತುಂಬಿ ತುಳುಕುತ್ತವೆ….

ಇಲ್ಲಿ ನಾವು ಮಾಡಬೇಕಿರುವುದು ಹೆಚ್ಚೇನೂ ಇಲ್ಲ.

ಎಲ್ಲ ಭಾವಗಳಲ್ಲೂ ಸಂಚರಿಸುತ್ತಾ ಪ್ರೀತಿ ಎಂಬ ಭಾವವನ್ನು ಅಪ್ಪಿಕೊಳ್ಳೋಣ…..

ಪ್ರೀತಿ ಎಂಬ ಭಾವದಲ್ಲಿ ಸ್ಥಾಯಿಯಾಗೋಣ.
ಅದೊಂದು ಅದ್ಬುತ ಪ್ರಪಂಚ.

ಬೇರೆ ಎಲ್ಲಾ ಭಾವಗಳಿಗೂ ಅಧಿಪತಿ ಈ ಪ್ರೀತಿ ಎಂಬ ಭಾವ. ಇದು ಎಂದೆಂದಿಗೂ ಮುಗಿಯದ ಅಕ್ಷಯ ಭಾವ.

ನಿಷ್ಕಲ್ಮಶ ಪ್ರೀತಿಗೆ ಯಾವ ಮಿತಿಯೂ ಇಲ್ಲ. ಹರಿಯಲು ಬಿಡಿ ಪ್ರೀತಿಯನ್ನು….

ಅದು ಮತ್ತಷ್ಟು ವಿಶಾಲವಾಗುತ್ತಾ ಸಾಗುತ್ತದೆ. ನಿರೀಕ್ಷೆಗಳಿಲ್ಲದ ,
ಸ್ವಾರ್ಥವಿಲ್ಲದ ಪ್ರೀತಿ ನಿಮ್ಮನ್ನು ಆಂತರಿಕವಾಗಿ ಎತ್ತರೆತ್ತರಕ್ಕೆ ಕೊಂಡೊಯ್ಯುತ್ತದೆ.

ಪ್ರೀತಿ ಎಂಬ ಭಾವ ಎಲ್ಲಾ ಸಂಬಂಧಗಳನ್ನು ಮೀರಿ ಬದುಕನ್ನು ಸಾರ್ಥಕತೆಯತ್ತಾ ಮುನ್ನಡೆಸುತ್ತದೆ.

ಸಾಮಾನ್ಯ ವ್ಯಾವಹಾರಿಕ ಬದುಕಿನಲ್ಲಿ ಇದು ಅತ್ಯಂತ ಕಠಿಣ.
ಆದರೆ,
ಅಸಾಮಾನ್ಯರಾಗಲು ಅಸಾಧ್ಯವಾದುದನ್ನೇ ಸಾಧಿಸಬೇಕಲ್ಲವೇ ?

ದೇಶದ ಹಿತಾಸಕ್ತಿಯಿಂದ ಪ್ರಯತ್ನಿಸಿ ಇಂದಿನಿಂದಲೇ, ನೀವಿರುವ ನೆಲೆಯಲ್ಲಿಯೇ..
ಇದರಿಂದ ಯಾವ ದುಷ್ಪರಿಣಾಮಗಳು ಇಲ್ಲವೆಂಬ ಖಚಿತ ಭರವಸೆ ನೀಡಬಲ್ಲೆ ಮಾನ್ಯ ನರೇಂದ್ರ ಮೋದಿ ಅವರೇ…

ಏಕೆಂದರೆ,

“ಸಮಾಜದ ಕಟ್ಟಕಡೆಯ ವ್ಯಕ್ತಿ, ಸ್ವಾತಂತ್ರ್ಯ ಮತ್ತು ಸಾಮಾಜಿಕ ವ್ಯವಸ್ಥೆ ” ಎಂಬ ಅಪ್ರಕಟಿತ ಕೃತಿಯಲ್ಲಿ ಮತ್ತು ಅದನ್ನು ಬರೆಯುವಾಗ ತಿಳಿದ ಕೆಲವು ಅನುಭವಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
ಕೇಳಲು, ಓದಲು ಹಿಂಸೆಯಾದರೆ ಕ್ಷಮೆ ಇರಲಿ.

ರಸ್ತೆ ಬದಿಯಲ್ಲಿ ಅನಾಥರಂತೆ ಸಾಯುವ ಮಾಹಿತಿಯೇ ಇಲ್ಲದ ಬಹಳಷ್ಟು ಜನರನ್ನು ಬಿಹಾರದಲ್ಲಿ ನೋಡಿದೆ.

ತನ್ನ ಕುಟುಂಬದವರ ಎರಡೊತ್ತಿನ ಊಟಕ್ಕಾಗಿ 5/6 ಜನ ವಿಟ ಪುರುಷರಿಗೆ ತನ್ನ ಮುದಿ ದೇಹವನ್ನು ಮಾರಿಕೊಂಡ ಹೆಣ್ಣನ್ನು ಅಸ್ಸಾಮಿನಲ್ಲಿ ಭೇಟಿಯಾದೆ.

ಇನ್ನೂ ಟಿವಿ ಎಂದರೆ ಏನೆಂದು ತಿಳಿಯದ ಜನರನ್ನು ನಾಗಾ ಲ್ಯಾಂಡ್ ನಲ್ಲಿ ಕಂಡೆ.

ಹಣಕ್ಕಾಗಿ ತಮ್ಮ ಕಿಡ್ನಿಯನ್ನೇ ಬೇಗ ಮಾರಿಸಿಕೊಡಲು ದಲ್ಲಾಳಿಗಳಿಗೆ ದಂಬಾಲು ಬಿದ್ದು ಲಂಚ ಕೊಡುವ ಹಳ್ಳಿ ಯೊಂದನ್ನು ಜಾರ್ಖಂಡ್ ನಲ್ಲಿ ಗಮನಿಸಿದೆ.

ಹಣಕ್ಕಾಗಿ ಮಕ್ಕಳನ್ನು ಹೆತ್ತು ಮಾರುವ ಒಂದು ಗ್ರಾಮವೇ ಒರಿಸ್ಸಾದಲ್ಲಿದೆ.

ತಮ್ಮ ಮನೆಯಲ್ಲಿಯೇ ತಾಯಿ, ಹೆಂಡತಿ, ಅಕ್ಕ, ತಂಗಿಯರನ್ನು ಇಟ್ಟುಕೊಂಡು ವೇಶ್ಯಾಗೃಹ ನಡೆಸುವ ಅನೇಕ ಊರುಗಳು ಆಂಧ್ರ ಪ್ರದೇಶದಲ್ಲಿ ಇವೆ.

ಮಕ್ಕಳನ್ನು ಕದ್ದು ಅವರ ಕಣ್ಣುಕಿತ್ತು ಅಥವಾ ಅಂಗವಿಕಲರನ್ನಾಗಿ ಮಾಡಿ ಅವರಿಂದ ಭಿಕ್ಷೆ ಬೇಡಿಸಿ ಜೀವಿಸುವ ಕೆಲವು ಕುಟುಂಬಗಳು
ಛತ್ತೀಸ್ ಗಡದಲ್ಲಿವೆ.

ಇಡೀ ಜೀವನವನ್ನೇ ಕುಟುಂಬ ಸಮೇತ ರಸ್ತೆಯ ಬದಿಯಲ್ಲಿಯೇ ಕಳೆದ ಸಂಸಾರಗಳನ್ನು ಮುಂಬೈನಲ್ಲಿ ಮಾತನಾಡಿಸಿದೆ.

ಹುಟ್ಟಿಸಿದ ತಂದೆ ತಾಯಿಯನ್ನೇ ಅನುಕೂಲಸ್ತ ಮಗನೊಬ್ಬ ಹೆಂಡತಿಯ ಮಾತು ಕೇಳಿ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಭಿಕ್ಷಾಟನೆ ಮಾಡುತ್ತಿದ್ದ ಅಪರಾಧಿಗಳೆಂದು ಸುಳ್ಳು ಹೇಳಿ ಸೇರಿಸಿದ ಪ್ರಕರಣಕ್ಕೆ ಕರ್ನಾಟಕದಲ್ಲಿ ನಾನೇ ಖುದ್ದು ಸಾಕ್ಷೀದಾರ.

ಪ್ರಧಾನಿ, ಮುಖ್ಯಮಂತ್ರಿ ಇರಲಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವಿದ್ದೇವೆ ಎಂಬ ಅರಿವೇ ಇರದ ಬಹಳಷ್ಟು ಜನರನ್ನು ಉತ್ತರಪ್ರದೇಶದಲ್ಲಿ ಮಾತನಾಡಿಸಿದೆ.

ಇದು ಕೆಲವು ಉದಾಹರಣೆಗಳು ಅಷ್ಟೆ. ಮುಂದೊಮ್ಮೆ ಬಹಳಷ್ಟು ಹೃದಯ ಬಿರಿಯುವ ಘಟನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ.

ಇನ್ನೂ,
ಕಳ್ಳತನ, ಸುಳ್ಳು, ವಂಚನೆಗಳನ್ನೇ ವೃತ್ತಿ ಮಾಡಿಕೊಂಡಿರುವ ಅನೇಕರನ್ನು ದೇಶದ ಎಲ್ಲಾ ವಿಧಾನ ಮಂಡಲ ಮತ್ತು ಸಂಸತ್ತಿನಲ್ಲಿ ಕಂಡೆ ಎಂದು ನಿಮಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲವಲ್ಲ.

ವಿಶ್ವಗುರು ಭಾರತ ಎನ್ನುವ ನಾವು ಇದನ್ನೂ ಗಮನಿಸಬೇಕಲ್ಲವೇ.
ಸಂವೇದನೆಗಳೇ ಇಲ್ಲದ ಈ ವ್ಯವಸ್ಥೆಯ ಬಗ್ಗೆ ಆಕ್ರೋಶ ಉಂಟಾಗುತ್ತದೆ.
ಬದಲಾವಣೆ ಕೆಳ ಮಟ್ಟದಿಂದ ಆಗಬೇಕಿದೆ. ಇದರಲ್ಲಿ ನಮ್ಮೆಲ್ಲರ ಜವಾಬ್ದಾರಿಯೂ ಇದೆ. ಅದನ್ನು ನಿಭಾಯಿಸಲು ಸಿದ್ದರಾಗೋಣ.

ನಿನ್ನೆ ಮಾನ್ಯ ನರೇಂದ್ರ ಮೋದಿಯವರ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು. ಏಕೆಂದರೆ ದೇಶದ ಮುಖ್ಯಸ್ಥರು ತುಂಬಾ ಸೂಕ್ಷ್ಮವಾಗಿ, ಸಂವೇದನೆಯಿಂದ, ಸಂಯಮದಿಂದ ತಮ್ಮ ಮನಸ್ಸಿನ ಮೇಲೆ ನಿಯಂತ್ರಣ ಹೊಂದಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಬಹುದೊಡ್ಡ ಜವಾಬ್ದಾರಿಯನ್ನು ಅರಿತು ಮಾತನಾಡಬೇಕು ಎಂಬ ನಿರೀಕ್ಷೆ ನಮ್ಮದು. ಸಾಮಾನ್ಯ ವ್ಯಕ್ತಿಯಂತೆ ಹಗುರವಾಗಿ ಮಾತನಾಡಿದರೆ ಅದು ಅವರ ಘನತೆಗೆ ಕುಂದು. ಉಳಿದದ್ದು ಅವರವರ ವಿವೇಚನೆಗೆ ಬಿಡುತ್ತಾ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago