ಚಿಂತಾಮಣಿ: ಹಣಕಾಸಿನ ವಿಚಾರಕ್ಕೆ ಬಾರ್ ಕ್ಯಾಶಿಯರ್ ಹಾಗೂ ಮತ್ತೊಂದು ವ್ಯಕ್ತಿ ನಡುವೆ ಆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇಂದು ಮಧ್ಯಾಹ್ನ ಚಿಂತಾಮಣಿ ನಗರದಲ್ಲಿ ನಡೆದಿದೆ.
ತಾಲೂಕಿನ ಚಿಲಕಲನೇರ್ಪು ಹೋಬಳಿ ಬುಡುಗುಂಟೆ ಗ್ರಾಮದ ಚಲಪತಿ ರವರ ಪುತ್ರ ಹೇಮಂತ್ ಕುಮಾರ್ (25), ಗುರುವಾರ ರಾತ್ರಿ ಹಣಕಾಸಿನ ವಿಚಾರಕ್ಕೆ ಆರ್.ಆರ್ ಬಾರ್ ಕ್ಯಾಶಿಯರ್ ನಡುವೆ ಗಲಾಟೆಯಾಗಿದೆ.
ಪುನಃ ಮತ್ತೆ ಇಂದು(ಶುಕ್ರವಾರ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿ ಆರ್ ಆರ್ ಬಾರ್ ಸಮೀಪವಿರುವ ಹೆಚ್.ಪಿ ಪೆಟ್ರೋಲ್ ಬಂಕ್ ನ ಕೊಠಡಿ ಒಂದರಲ್ಲಿ ಹೇಮಂತ್ ಕುಮಾರ್ ನನ್ನು ಬರ್ಬರಯಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊಲೆಯಾದ ಹೇಮಂತ್ ಒಂದು ವರ್ಷಗಳ ಹಿಂದೆ ಇದೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ನಗರ ಠಾಣೆಯ ಆರಕ್ಷಕ ನಿರೀಕ್ಷಕರಾದ ರಂಗಶಾಮಯ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…