ಚಿಂತಾಮಣಿ: ಹಣಕಾಸಿನ ವಿಚಾರಕ್ಕೆ ಬಾರ್ ಕ್ಯಾಶಿಯರ್ ಹಾಗೂ ಮತ್ತೊಂದು ವ್ಯಕ್ತಿ ನಡುವೆ ಆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇಂದು ಮಧ್ಯಾಹ್ನ ಚಿಂತಾಮಣಿ ನಗರದಲ್ಲಿ ನಡೆದಿದೆ.
ತಾಲೂಕಿನ ಚಿಲಕಲನೇರ್ಪು ಹೋಬಳಿ ಬುಡುಗುಂಟೆ ಗ್ರಾಮದ ಚಲಪತಿ ರವರ ಪುತ್ರ ಹೇಮಂತ್ ಕುಮಾರ್ (25), ಗುರುವಾರ ರಾತ್ರಿ ಹಣಕಾಸಿನ ವಿಚಾರಕ್ಕೆ ಆರ್.ಆರ್ ಬಾರ್ ಕ್ಯಾಶಿಯರ್ ನಡುವೆ ಗಲಾಟೆಯಾಗಿದೆ.
ಪುನಃ ಮತ್ತೆ ಇಂದು(ಶುಕ್ರವಾರ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿ ಆರ್ ಆರ್ ಬಾರ್ ಸಮೀಪವಿರುವ ಹೆಚ್.ಪಿ ಪೆಟ್ರೋಲ್ ಬಂಕ್ ನ ಕೊಠಡಿ ಒಂದರಲ್ಲಿ ಹೇಮಂತ್ ಕುಮಾರ್ ನನ್ನು ಬರ್ಬರಯಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊಲೆಯಾದ ಹೇಮಂತ್ ಒಂದು ವರ್ಷಗಳ ಹಿಂದೆ ಇದೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ನಗರ ಠಾಣೆಯ ಆರಕ್ಷಕ ನಿರೀಕ್ಷಕರಾದ ರಂಗಶಾಮಯ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…