Categories: ಲೇಖನ

ನಿಮಿಷಾ ಪ್ರಿಯ….

ನಿಮಿಷಾ ಪ್ರಿಯ…….

ಬದುಕು ಜಟಕಾ ಬಂಡಿ,
ವಿಧಿ ಅದರ ಸಾಹೇಬ,
ಕುದುರೆ ನೀನ್,
ಅವನು ಪೇಳ್ದಂತೆ ಪಯಣಿಗರು,
ಮದುವೆಗೋ ಮಸಣಕೋ, ಹೋಗೆಂದ ಕಡೆಗೋಡು,
ಪದ ಕುಸಿಯೇ ನೆಲವಿಹುದು
ಮಂಕು ತಿಮ್ಮ,…….
ಡಿವಿಜಿ.

ದೂರದ ಯೆಮೆನ್ ದೇಶದಲ್ಲಿ ಬದುಕು ಕಟ್ಟಿಕೊಳ್ಳಲು ಹೋದ ಕೇರಳದ ಪಾಲಕ್ಕಾಡಿನ ನಿಮಿಷಾ ಪ್ರಿಯ ಎಂಬ ದಾದಿ, ಬದುಕಿನ ಆಕಸ್ಮಿಕ ಹೊಡೆತಕ್ಕೆ ಸಿಲುಕಿ ಕೊಲೆ ಆರೋಪದ ಅಪರಾಧ ಸಾಬೀತಾಗಿ, ಮರಣದಂಡನೆ ಶಿಕ್ಷೆಗೆ ಗುರಿಯಾಗಿ, ಸಾವು ಬದುಕಿನ ನಡುವೆ ದಿನಗಳನ್ನು ದೂಡುತ್ತಾ ಯಾವುದೇ ಕ್ಷಣದಲ್ಲಿ ನೇಣುಗಂಬಕ್ಕೇರುವ ಅಥವಾ ಬಿಡುಗಡೆಯಾಗಿ ಹೊಸ ಬದುಕಿನೊಂದಿಗೆ ತನ್ನ ಹುಟ್ಟೂರಿಗೆ ಬರುವ ಅತ್ಯಂತ ತೆಳುವಾದ ಗೆರೆಯ ಮಧ್ಯೆ ನಿಂತಿದ್ದಾಳೆ.

ಕೆಲವು ವಿಷಯಗಳೇ ಹಾಗೆ. ಇದ್ದಕ್ಕಿದ್ದಂತೆ ತುಂಬಾ ಪ್ರಚಾರಕ್ಕೆ ಬಂದು ಬಿಡುತ್ತವೆ. ಇಂತಹ ಘಟನೆಗಳು ಸಾಕಷ್ಟು ನಡೆಯುತ್ತಿದ್ದರೂ ಕೆಲವೊಂದು ಘಟನೆಗಳು ಮಾತ್ರ ವಿಶೇಷ ಮಹತ್ವವನ್ನು ಪಡೆಯುತ್ತವೆ. ಉದಾಹರಣೆಗೆ ದೆಹಲಿಯಲ್ಲಿ ನೂರಾರು ಅತ್ಯಾಚಾರ ಪ್ರಕರಣಗಳು ನಡೆದಿದ್ದರು ಜ್ಯೋತಿಸಿಂಗ್ ಎಂಬ ನಿರ್ಭಯ ಪ್ರಕರಣ ಇಡೀ ರಾಷ್ಟ್ರದ ಗಮನ ಸೆಳೆಯಿತು. ಹಾಗೆಯೇ ಈಗ ನಿಮಿಷಾ ಪ್ರಿಯ ದೇಶದ ಎಲ್ಲರ ಮನಸ್ಸುಗಳಲ್ಲಿ ಸೇರಿ ಕುತೂಹಲದಿಂದ, ಮರುಕದಿಂದ ಬಿಡುಗಡೆಗಾಗಿ
ಪ್ರಾರ್ಥಿಸುವಂತಾಗಿದೆ.

ಇಡೀ ಘಟನೆಯ ಬಗ್ಗೆ ಬಂದಿರುವ ಸುದ್ದಿಗಳ ಆಧಾರದಲ್ಲಿ ಹೇಳುವುದಾದರೆ ಆಕೆಯದು ಉದ್ದೇಶಪೂರ್ವಕ ಕೊಲೆಯಲ್ಲ. 2017 ರಲ್ಲಿ ಸಾಂಸಾರಿಕ ಮತ್ತು ವ್ಯಾವಹಾರಿಕ ಘರ್ಷಣೆಯಲ್ಲಿ ಕೋಪದಿಂದ ತನ್ನ ಸಹಪಾಠಿಗೆ ನೀಡಿದ ಅನಸ್ತೇಶಿಯಾ ಮಾದರಿಯ ಔಷಧದ ಡೋಸ್ ಹೆಚ್ಚಾಗಿ ಆತ ನಿಧನ ಹೊಂದಿ, ಈಕೆಯನ್ನು ಕೊಲೆ ಆರೋಪದಲ್ಲಿ ಬಂಧಿಸಿ ಅಪರಾಧಿಯನ್ನಾಗಿ ಮಾಡಲಾಗಿದೆ. ಬಹುತೇಕ ಗಲ್ಲು ಶಿಕ್ಷೆ ಖಾಯಂ ಆಗಿದೆ. ಅದನ್ನು ತಪ್ಪಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಆಕೆ ಮರಳಿ ಭಾರತಕ್ಕೆ ಜೀವಂತ ಬಂದು ಹೊಸ ಬದುಕು ರೂಪಿಸಿಕೊಳ್ಳಲಿ ಎಂದು ತುಂಬು ಹೃದಯದಿಂದ ನಿಮ್ಮೆಲ್ಲರ ಪರವಾಗಿ ಹಾರೈಸುತ್ತಾ……

ಬದುಕೇ ಹಾಗೆ, ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ಆಕಸ್ಮಿಕವಾಗಿ ಅನೇಕ ತಿರುವುಗಳನ್ನು ಪಡೆಯುತ್ತಾ ಎಲ್ಲೆಲ್ಲಿಗೋ ಕೊಂಡೊಯ್ಯುತ್ತದೆ. ಆ ಕೊಂಡೊಯ್ಯುವಿಕೆ ಪ್ರಗತಿಪರವಾಗಿ, ಸುಖಕರವಾಗಿ, ಆರೋಗ್ಯಕರವಾಗಿ, ಸಹಜವಾಗಿ ಇದ್ದರೆ ಅದೊಂದು ಯಶಸ್ವಿ ಬದುಕು. ಆದರೆ ಅದೇ ಬದುಕು ವಿಫಲವಾಗಿ, ಅಸಹಾಯಕವಾಗಿ, ವಿನಾಶದತ್ತ ಕೊಂಡೊಯ್ದರೆ ಆ ಬದುಕು ಅತ್ಯಂತ ಅಸಹನೀಯ ಮತ್ತು ದುರಾದೃಷ್ಟಕರವಾಗಿರುತ್ತದೆ.

ನಿಮಿಷಾ ಪ್ರಿಯ ಬದುಕು ಕೂಡ ಹಾಗೆ ವಿನಾಶದತ್ತ ಸಾಗಿದೆ. ಸುಮಾರು ಎಂಟು ವರ್ಷಗಳಿಂದ ಸತತವಾಗಿ ಜೈಲಿನಲ್ಲಿ ಕೊಳೆಯುತ್ತಾ ತನ್ನದಲ್ಲದ ದೇಶದಲ್ಲಿ, ಸದಾ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಿರುವ, ಭಾರತದಂತ ಪ್ರಜಾಪ್ರಭುತ್ವ ಸರ್ಕಾರ ಇಲ್ಲದ, ಧರ್ಮಾಧಾರಿತ ದೇಶದಲ್ಲಿ ಒಂಟಿಯಾಗಿ, ಜೈಲಿನ ಸರಳುಗಳ ನಡುವೆ ಕಾಲ ಕಳೆಯುತ್ತಿರುವ ನಿಮಿಷಾ ಪ್ರಿಯ ಮಾನಸಿಕ ಸ್ಥಿತಿ ಹೇಗಿರಬಹುದು ಎಂದು ಊಹಿಸಿಕೊಳ್ಳಲೂ ಕಷ್ಟವಾಗುತ್ತದೆ. ಬಹುಶಃ ಮಧ್ಯವಯಸ್ಕಳಾಗಿರುವ ಆಕೆ ತನ್ನ ಪರಿಸ್ಥಿತಿಗೆ ಎಷ್ಟೊಂದು ಪಶ್ಚಾತಾಪ ಪಡುತ್ತಿರಬಹುದು ಅಥವಾ ದೃಢ ಮನಸ್ಸಿನಿಂದ ತಾನು ಬಿಡುಗಡೆಯಾಗುವುದಾಗಿ ಆತ್ಮವಿಶ್ವಾಸದಿಂದ ಇರಬಹುದೇ. ಆಕೆಗೆ ಹೊರ ಜಗತ್ತಿನಲ್ಲಿ ನಡೆಯುತ್ತಿರುವ ಎಲ್ಲಾ ವಿಷಯಗಳು ಅರಿವಿರಬಹುದೇ….

ಯಾವುದೋ ವಾಸಿಯಾಗದ ಖಾಯಿಲೆಯಂತೆ, ಎಲ್ಲೋ ದಾರಿ ತಪ್ಪಿ ಕಳೆದು ಹೋದ ಆತಂಕದಂತೆ, ವಿಷಾನಿಲಕ್ಕೆ ಸಿಲುಕಿ ಉಸಿರುಗಟ್ಟಿದಂತೆ, ಪ್ರಪಾತಕ್ಕೆ ಬಿದ್ದು ಭಯಭೀತವಾದಂತೆ, ನೀರಿನ ಪ್ರವಾಹಕ್ಕೆ ತುತ್ತಾಗಿ ಕೊಚ್ಚಿ ಹೋದಂತೆ ನಿಮಿಷಾ ಪ್ರಿಯ ಮನಸ್ಸು ಅಲ್ಲೋಲ ಕಲ್ಲೋಲ ಆಗಿರಬಹುದಲ್ಲವೇ…

ಈ ರೀತಿಯ ಘಟನೆಗಳು ನಮ್ಮ ಅರಿವಿಗೆ ಬಂದಾಗ ನಾವು ಅದರ ಮೂಲವನ್ನು ಗಂಭೀರವಾಗಿ ಯೋಚಿಸಿ ಆತ್ಮವಿಮರ್ಶೆ ಮಾಡಿಕೊಂಡು ನಮ್ಮೊಳಗಿನ ತಾಳ್ಮೆಯ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ದುಡುಕಿ ಅತ್ಯಂತ ಅಪಾಯಕಾರಿ ಕೆಲಸಗಳಿಗೆ ಮುಂದಾಗಬಾರದು. ಅದರಿಂದಾಗಿ ಇಡೀ ಬದುಕೇ ಸರ್ವನಾಶವಾಗುತ್ತದೆ.

ಏನೇ ಆಗಲಿ ಆಕೆಯ ಬಿಡುಗಡೆಗಾಗಿ ನಡೆಯುತ್ತಿರುವ ಸಂಧಾನ ಯಶಸ್ವಿಯಾಗಿ ಆಕೆಗೆ ಮರುಜೀವ ಸಿಗಲಿ ಎಂದು ಮತ್ತೊಮ್ಮೆ ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

8 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

19 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

23 hours ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

2 days ago