Categories: ಲೇಖನ

ನಿಮಿಷಾ ಪ್ರಿಯ….

ನಿಮಿಷಾ ಪ್ರಿಯ…….

ಬದುಕು ಜಟಕಾ ಬಂಡಿ,
ವಿಧಿ ಅದರ ಸಾಹೇಬ,
ಕುದುರೆ ನೀನ್,
ಅವನು ಪೇಳ್ದಂತೆ ಪಯಣಿಗರು,
ಮದುವೆಗೋ ಮಸಣಕೋ, ಹೋಗೆಂದ ಕಡೆಗೋಡು,
ಪದ ಕುಸಿಯೇ ನೆಲವಿಹುದು
ಮಂಕು ತಿಮ್ಮ,…….
ಡಿವಿಜಿ.

ದೂರದ ಯೆಮೆನ್ ದೇಶದಲ್ಲಿ ಬದುಕು ಕಟ್ಟಿಕೊಳ್ಳಲು ಹೋದ ಕೇರಳದ ಪಾಲಕ್ಕಾಡಿನ ನಿಮಿಷಾ ಪ್ರಿಯ ಎಂಬ ದಾದಿ, ಬದುಕಿನ ಆಕಸ್ಮಿಕ ಹೊಡೆತಕ್ಕೆ ಸಿಲುಕಿ ಕೊಲೆ ಆರೋಪದ ಅಪರಾಧ ಸಾಬೀತಾಗಿ, ಮರಣದಂಡನೆ ಶಿಕ್ಷೆಗೆ ಗುರಿಯಾಗಿ, ಸಾವು ಬದುಕಿನ ನಡುವೆ ದಿನಗಳನ್ನು ದೂಡುತ್ತಾ ಯಾವುದೇ ಕ್ಷಣದಲ್ಲಿ ನೇಣುಗಂಬಕ್ಕೇರುವ ಅಥವಾ ಬಿಡುಗಡೆಯಾಗಿ ಹೊಸ ಬದುಕಿನೊಂದಿಗೆ ತನ್ನ ಹುಟ್ಟೂರಿಗೆ ಬರುವ ಅತ್ಯಂತ ತೆಳುವಾದ ಗೆರೆಯ ಮಧ್ಯೆ ನಿಂತಿದ್ದಾಳೆ.

ಕೆಲವು ವಿಷಯಗಳೇ ಹಾಗೆ. ಇದ್ದಕ್ಕಿದ್ದಂತೆ ತುಂಬಾ ಪ್ರಚಾರಕ್ಕೆ ಬಂದು ಬಿಡುತ್ತವೆ. ಇಂತಹ ಘಟನೆಗಳು ಸಾಕಷ್ಟು ನಡೆಯುತ್ತಿದ್ದರೂ ಕೆಲವೊಂದು ಘಟನೆಗಳು ಮಾತ್ರ ವಿಶೇಷ ಮಹತ್ವವನ್ನು ಪಡೆಯುತ್ತವೆ. ಉದಾಹರಣೆಗೆ ದೆಹಲಿಯಲ್ಲಿ ನೂರಾರು ಅತ್ಯಾಚಾರ ಪ್ರಕರಣಗಳು ನಡೆದಿದ್ದರು ಜ್ಯೋತಿಸಿಂಗ್ ಎಂಬ ನಿರ್ಭಯ ಪ್ರಕರಣ ಇಡೀ ರಾಷ್ಟ್ರದ ಗಮನ ಸೆಳೆಯಿತು. ಹಾಗೆಯೇ ಈಗ ನಿಮಿಷಾ ಪ್ರಿಯ ದೇಶದ ಎಲ್ಲರ ಮನಸ್ಸುಗಳಲ್ಲಿ ಸೇರಿ ಕುತೂಹಲದಿಂದ, ಮರುಕದಿಂದ ಬಿಡುಗಡೆಗಾಗಿ
ಪ್ರಾರ್ಥಿಸುವಂತಾಗಿದೆ.

ಇಡೀ ಘಟನೆಯ ಬಗ್ಗೆ ಬಂದಿರುವ ಸುದ್ದಿಗಳ ಆಧಾರದಲ್ಲಿ ಹೇಳುವುದಾದರೆ ಆಕೆಯದು ಉದ್ದೇಶಪೂರ್ವಕ ಕೊಲೆಯಲ್ಲ. 2017 ರಲ್ಲಿ ಸಾಂಸಾರಿಕ ಮತ್ತು ವ್ಯಾವಹಾರಿಕ ಘರ್ಷಣೆಯಲ್ಲಿ ಕೋಪದಿಂದ ತನ್ನ ಸಹಪಾಠಿಗೆ ನೀಡಿದ ಅನಸ್ತೇಶಿಯಾ ಮಾದರಿಯ ಔಷಧದ ಡೋಸ್ ಹೆಚ್ಚಾಗಿ ಆತ ನಿಧನ ಹೊಂದಿ, ಈಕೆಯನ್ನು ಕೊಲೆ ಆರೋಪದಲ್ಲಿ ಬಂಧಿಸಿ ಅಪರಾಧಿಯನ್ನಾಗಿ ಮಾಡಲಾಗಿದೆ. ಬಹುತೇಕ ಗಲ್ಲು ಶಿಕ್ಷೆ ಖಾಯಂ ಆಗಿದೆ. ಅದನ್ನು ತಪ್ಪಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಆಕೆ ಮರಳಿ ಭಾರತಕ್ಕೆ ಜೀವಂತ ಬಂದು ಹೊಸ ಬದುಕು ರೂಪಿಸಿಕೊಳ್ಳಲಿ ಎಂದು ತುಂಬು ಹೃದಯದಿಂದ ನಿಮ್ಮೆಲ್ಲರ ಪರವಾಗಿ ಹಾರೈಸುತ್ತಾ……

ಬದುಕೇ ಹಾಗೆ, ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ಆಕಸ್ಮಿಕವಾಗಿ ಅನೇಕ ತಿರುವುಗಳನ್ನು ಪಡೆಯುತ್ತಾ ಎಲ್ಲೆಲ್ಲಿಗೋ ಕೊಂಡೊಯ್ಯುತ್ತದೆ. ಆ ಕೊಂಡೊಯ್ಯುವಿಕೆ ಪ್ರಗತಿಪರವಾಗಿ, ಸುಖಕರವಾಗಿ, ಆರೋಗ್ಯಕರವಾಗಿ, ಸಹಜವಾಗಿ ಇದ್ದರೆ ಅದೊಂದು ಯಶಸ್ವಿ ಬದುಕು. ಆದರೆ ಅದೇ ಬದುಕು ವಿಫಲವಾಗಿ, ಅಸಹಾಯಕವಾಗಿ, ವಿನಾಶದತ್ತ ಕೊಂಡೊಯ್ದರೆ ಆ ಬದುಕು ಅತ್ಯಂತ ಅಸಹನೀಯ ಮತ್ತು ದುರಾದೃಷ್ಟಕರವಾಗಿರುತ್ತದೆ.

ನಿಮಿಷಾ ಪ್ರಿಯ ಬದುಕು ಕೂಡ ಹಾಗೆ ವಿನಾಶದತ್ತ ಸಾಗಿದೆ. ಸುಮಾರು ಎಂಟು ವರ್ಷಗಳಿಂದ ಸತತವಾಗಿ ಜೈಲಿನಲ್ಲಿ ಕೊಳೆಯುತ್ತಾ ತನ್ನದಲ್ಲದ ದೇಶದಲ್ಲಿ, ಸದಾ ಹಿಂಸಾತ್ಮಕ ಕೃತ್ಯಗಳು ನಡೆಯುತ್ತಿರುವ, ಭಾರತದಂತ ಪ್ರಜಾಪ್ರಭುತ್ವ ಸರ್ಕಾರ ಇಲ್ಲದ, ಧರ್ಮಾಧಾರಿತ ದೇಶದಲ್ಲಿ ಒಂಟಿಯಾಗಿ, ಜೈಲಿನ ಸರಳುಗಳ ನಡುವೆ ಕಾಲ ಕಳೆಯುತ್ತಿರುವ ನಿಮಿಷಾ ಪ್ರಿಯ ಮಾನಸಿಕ ಸ್ಥಿತಿ ಹೇಗಿರಬಹುದು ಎಂದು ಊಹಿಸಿಕೊಳ್ಳಲೂ ಕಷ್ಟವಾಗುತ್ತದೆ. ಬಹುಶಃ ಮಧ್ಯವಯಸ್ಕಳಾಗಿರುವ ಆಕೆ ತನ್ನ ಪರಿಸ್ಥಿತಿಗೆ ಎಷ್ಟೊಂದು ಪಶ್ಚಾತಾಪ ಪಡುತ್ತಿರಬಹುದು ಅಥವಾ ದೃಢ ಮನಸ್ಸಿನಿಂದ ತಾನು ಬಿಡುಗಡೆಯಾಗುವುದಾಗಿ ಆತ್ಮವಿಶ್ವಾಸದಿಂದ ಇರಬಹುದೇ. ಆಕೆಗೆ ಹೊರ ಜಗತ್ತಿನಲ್ಲಿ ನಡೆಯುತ್ತಿರುವ ಎಲ್ಲಾ ವಿಷಯಗಳು ಅರಿವಿರಬಹುದೇ….

ಯಾವುದೋ ವಾಸಿಯಾಗದ ಖಾಯಿಲೆಯಂತೆ, ಎಲ್ಲೋ ದಾರಿ ತಪ್ಪಿ ಕಳೆದು ಹೋದ ಆತಂಕದಂತೆ, ವಿಷಾನಿಲಕ್ಕೆ ಸಿಲುಕಿ ಉಸಿರುಗಟ್ಟಿದಂತೆ, ಪ್ರಪಾತಕ್ಕೆ ಬಿದ್ದು ಭಯಭೀತವಾದಂತೆ, ನೀರಿನ ಪ್ರವಾಹಕ್ಕೆ ತುತ್ತಾಗಿ ಕೊಚ್ಚಿ ಹೋದಂತೆ ನಿಮಿಷಾ ಪ್ರಿಯ ಮನಸ್ಸು ಅಲ್ಲೋಲ ಕಲ್ಲೋಲ ಆಗಿರಬಹುದಲ್ಲವೇ…

ಈ ರೀತಿಯ ಘಟನೆಗಳು ನಮ್ಮ ಅರಿವಿಗೆ ಬಂದಾಗ ನಾವು ಅದರ ಮೂಲವನ್ನು ಗಂಭೀರವಾಗಿ ಯೋಚಿಸಿ ಆತ್ಮವಿಮರ್ಶೆ ಮಾಡಿಕೊಂಡು ನಮ್ಮೊಳಗಿನ ತಾಳ್ಮೆಯ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ದುಡುಕಿ ಅತ್ಯಂತ ಅಪಾಯಕಾರಿ ಕೆಲಸಗಳಿಗೆ ಮುಂದಾಗಬಾರದು. ಅದರಿಂದಾಗಿ ಇಡೀ ಬದುಕೇ ಸರ್ವನಾಶವಾಗುತ್ತದೆ.

ಏನೇ ಆಗಲಿ ಆಕೆಯ ಬಿಡುಗಡೆಗಾಗಿ ನಡೆಯುತ್ತಿರುವ ಸಂಧಾನ ಯಶಸ್ವಿಯಾಗಿ ಆಕೆಗೆ ಮರುಜೀವ ಸಿಗಲಿ ಎಂದು ಮತ್ತೊಮ್ಮೆ ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

24 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago