Categories: ಕೋಲಾರ

ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ-ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಚಿಸಿದ್ದು, ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದವನು ಆಗಿದ್ದು, ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಬಲಗೈ ಸಮುದಾಯವಿದ್ದು, ಇದುವರೆವಿಗೂ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ, ಈ ಬಾರಿ ಪಕ್ಷದ ಹೈಕಮಾಂಡ್ ನಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ಆಗುತ್ತಿದ್ದು, ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಒಂದು ಅವಕಾಶ ಕೊಟ್ಟರೆ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರ ಬೆಂಬಲ ಹಾಗೂ ಮಾರ್ಗದರ್ಶನದಲ್ಲಿ ಗೆಲುವು ಖಂಡಿತ ಸಾಧಿಸಲು ಬಹಳಷ್ಟು ಅವಕಾಶಗಳು ಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ರೀತಿಯಲ್ಲಿ ಕೈಗಾರಿಕಗಳು ಇಲ್ಲವಾಗಿದ್ದು ಉದ್ಯೋಗಕ್ಕಾಗಿ ಹೊರಗಡೆ ಹೋಗಬೇಕಾಗಿದೆ. ಸರಿಯಾದ ಸಮರ್ಪಕ ರಸ್ತೆಗಳು ಸೇರಿದಂತೆ ನನ್ನದೇ ಆದ ಜಿಲ್ಲೆಯ ಅಭಿವೃದ್ಧಿಗಾಗಿ ಕನಸುಗಳಿವೆ ಎಂದು ತಿಳಿಸಿದರು

ರಾಜ್ಯದಲ್ಲಿ ಸಿನಿಮಾ ಸಂಗೀತ, ನಾಟಕ ನಿರ್ದೇಶಕನಾಗಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇನೆ. ಜೊತೆಗೆ ಸುಮಾರು 1980ರ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು, ಕೋಲಾರ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ, ಲೋಕಸಭಾ ಚುನಾವಣೆಗಳು ಸೇರಿದಂತೆ ಪ್ರತಿಯೊಂದು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದರು.

ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜನಪ್ರಿಯ ಸಾಲಮೇಳ ಕಾರ್ಯಕ್ರಮಗಳಲ್ಲಿ ಮತ್ತು ಸಾಧನ ಸಮಾವೇಶಗಳಲ್ಲಿ ತಮ್ಮ ತಂಡದೊಂದಿಗೆ ಪ್ರಚಾರ ಕಾರ್ಯದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. 1991 ಮೇ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುವವರೆಗೆ ತಮ್ಮ ತಂಡದೊಂದಿಗೆ ಪ್ರಚಾರ ಗೀತೆ ಕಾರ್ಯಕ್ರಮ ನಡೆಸಿದ್ದನ್ನು ಅವತ್ತು ಸತಃ ರಾಜೀವ್ ಗಾಧಿಯವರು ಬೆನ್ನು ತಟ್ಟಿ ಶ್ಲಾಘನೆ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆಯನ್ನು ಗುರುತಿಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ವರಿಷ್ಠರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅನೇಕಲ್ ಕೃಷ್ಣಪ್ಪ, ಲಕ್ಷೀನರಸಿಂಹಯ್ಯ, ಹಾರೋಹಳ್ಳಿ ಮಂಜುನಾಥ್ ಇದ್ದರು

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

11 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago