ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಚಿಸಿದ್ದು, ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ ಮಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದವನು ಆಗಿದ್ದು, ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಬಲಗೈ ಸಮುದಾಯವಿದ್ದು, ಇದುವರೆವಿಗೂ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ, ಈ ಬಾರಿ ಪಕ್ಷದ ಹೈಕಮಾಂಡ್ ನಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ಆಗುತ್ತಿದ್ದು, ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಒಂದು ಅವಕಾಶ ಕೊಟ್ಟರೆ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರ ಬೆಂಬಲ ಹಾಗೂ ಮಾರ್ಗದರ್ಶನದಲ್ಲಿ ಗೆಲುವು ಖಂಡಿತ ಸಾಧಿಸಲು ಬಹಳಷ್ಟು ಅವಕಾಶಗಳು ಇವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ರೀತಿಯಲ್ಲಿ ಕೈಗಾರಿಕಗಳು ಇಲ್ಲವಾಗಿದ್ದು ಉದ್ಯೋಗಕ್ಕಾಗಿ ಹೊರಗಡೆ ಹೋಗಬೇಕಾಗಿದೆ. ಸರಿಯಾದ ಸಮರ್ಪಕ ರಸ್ತೆಗಳು ಸೇರಿದಂತೆ ನನ್ನದೇ ಆದ ಜಿಲ್ಲೆಯ ಅಭಿವೃದ್ಧಿಗಾಗಿ ಕನಸುಗಳಿವೆ ಎಂದು ತಿಳಿಸಿದರು
ರಾಜ್ಯದಲ್ಲಿ ಸಿನಿಮಾ ಸಂಗೀತ, ನಾಟಕ ನಿರ್ದೇಶಕನಾಗಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇನೆ. ಜೊತೆಗೆ ಸುಮಾರು 1980ರ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು, ಕೋಲಾರ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ, ಲೋಕಸಭಾ ಚುನಾವಣೆಗಳು ಸೇರಿದಂತೆ ಪ್ರತಿಯೊಂದು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದರು.
ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜನಪ್ರಿಯ ಸಾಲಮೇಳ ಕಾರ್ಯಕ್ರಮಗಳಲ್ಲಿ ಮತ್ತು ಸಾಧನ ಸಮಾವೇಶಗಳಲ್ಲಿ ತಮ್ಮ ತಂಡದೊಂದಿಗೆ ಪ್ರಚಾರ ಕಾರ್ಯದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. 1991 ಮೇ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುವವರೆಗೆ ತಮ್ಮ ತಂಡದೊಂದಿಗೆ ಪ್ರಚಾರ ಗೀತೆ ಕಾರ್ಯಕ್ರಮ ನಡೆಸಿದ್ದನ್ನು ಅವತ್ತು ಸತಃ ರಾಜೀವ್ ಗಾಧಿಯವರು ಬೆನ್ನು ತಟ್ಟಿ ಶ್ಲಾಘನೆ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆಯನ್ನು ಗುರುತಿಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ವರಿಷ್ಠರನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅನೇಕಲ್ ಕೃಷ್ಣಪ್ಪ, ಲಕ್ಷೀನರಸಿಂಹಯ್ಯ, ಹಾರೋಹಳ್ಳಿ ಮಂಜುನಾಥ್ ಇದ್ದರು
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…