Categories: ಕೋಲಾರ

ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ-ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಚಿಸಿದ್ದು, ನಿಮ್ಮ ಸೇವೆ ಮಾಡಲು ಬಂದಿದ್ದೇನೆ ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಮದನ್ ಪಟೇಲ್ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದವನು ಆಗಿದ್ದು, ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಬಲಗೈ ಸಮುದಾಯವಿದ್ದು, ಇದುವರೆವಿಗೂ ಬಲಗೈ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ, ಈ ಬಾರಿ ಪಕ್ಷದ ಹೈಕಮಾಂಡ್ ನಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ಆಗುತ್ತಿದ್ದು, ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ ನನಗೆ ಒಂದು ಅವಕಾಶ ಕೊಟ್ಟರೆ ಜಿಲ್ಲೆಯ, ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖಂಡರ ಬೆಂಬಲ ಹಾಗೂ ಮಾರ್ಗದರ್ಶನದಲ್ಲಿ ಗೆಲುವು ಖಂಡಿತ ಸಾಧಿಸಲು ಬಹಳಷ್ಟು ಅವಕಾಶಗಳು ಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ರೀತಿಯಲ್ಲಿ ಕೈಗಾರಿಕಗಳು ಇಲ್ಲವಾಗಿದ್ದು ಉದ್ಯೋಗಕ್ಕಾಗಿ ಹೊರಗಡೆ ಹೋಗಬೇಕಾಗಿದೆ. ಸರಿಯಾದ ಸಮರ್ಪಕ ರಸ್ತೆಗಳು ಸೇರಿದಂತೆ ನನ್ನದೇ ಆದ ಜಿಲ್ಲೆಯ ಅಭಿವೃದ್ಧಿಗಾಗಿ ಕನಸುಗಳಿವೆ ಎಂದು ತಿಳಿಸಿದರು

ರಾಜ್ಯದಲ್ಲಿ ಸಿನಿಮಾ ಸಂಗೀತ, ನಾಟಕ ನಿರ್ದೇಶಕನಾಗಿ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇನೆ. ಜೊತೆಗೆ ಸುಮಾರು 1980ರ ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು, ಕೋಲಾರ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ, ಲೋಕಸಭಾ ಚುನಾವಣೆಗಳು ಸೇರಿದಂತೆ ಪ್ರತಿಯೊಂದು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದರು.

ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಜನಪ್ರಿಯ ಸಾಲಮೇಳ ಕಾರ್ಯಕ್ರಮಗಳಲ್ಲಿ ಮತ್ತು ಸಾಧನ ಸಮಾವೇಶಗಳಲ್ಲಿ ತಮ್ಮ ತಂಡದೊಂದಿಗೆ ಪ್ರಚಾರ ಕಾರ್ಯದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. 1991 ಮೇ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುವವರೆಗೆ ತಮ್ಮ ತಂಡದೊಂದಿಗೆ ಪ್ರಚಾರ ಗೀತೆ ಕಾರ್ಯಕ್ರಮ ನಡೆಸಿದ್ದನ್ನು ಅವತ್ತು ಸತಃ ರಾಜೀವ್ ಗಾಧಿಯವರು ಬೆನ್ನು ತಟ್ಟಿ ಶ್ಲಾಘನೆ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ನನ್ನ ಸೇವೆಯನ್ನು ಗುರುತಿಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ವರಿಷ್ಠರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅನೇಕಲ್ ಕೃಷ್ಣಪ್ಪ, ಲಕ್ಷೀನರಸಿಂಹಯ್ಯ, ಹಾರೋಹಳ್ಳಿ ಮಂಜುನಾಥ್ ಇದ್ದರು

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

9 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

16 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

17 hours ago