Categories: ರಾಜ್ಯ

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.

ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

37 minutes ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

16 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

17 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

23 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

24 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago