Categories: ರಾಜ್ಯ

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.

ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

20 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago