Categories: ರಾಜ್ಯ

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.

ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

15 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

19 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

19 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

22 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago