ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.
ಡೂಪ್ಲಿಕೇಟ್ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.
ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್ ಇನಸ್ಪೆಕ್ಟರ್ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…