Categories: ರಾಜ್ಯ

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ…ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಎಂದಿದ್ದಾರೆ.

ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು!  ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ಕೇಳಿದ್ದಾರೆ.

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

7 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago