ರಾಗಿ ಹುಲ್ಲು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ನೀರಿಲ್ಲದ ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ….
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ಇದೇ ಜಾಗದಲ್ಲಿ ಕೆಲ ದಿನಗಳಿಂದೆ ಕ್ಯಾಂಟರ್ ಲಾರಿ ಆಯಾತಪ್ಪಿ ಏರಿ ರಸ್ತೆಯಿಂದ ಕೆರೆ ಕಡೆಗೆ ಸ್ವಲ್ಪ ವಾಲಿತ್ತು. ಇಂದು ರಾಗಿ ಹುಲ್ಲಿನ ಲಾರಿ ಪಲ್ಟಿ ಹೊಡೆದಿದೆ.
ಕೆರೆ ಏರಿ ಮೇಲಿನ ರಸ್ತೆ ಕಿರಿದಾಗಿದ್ದು, ಇಲ್ಲಿ ಭಾರೀ ಗಾತ್ರದ ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಅತಿ ವೇಗ, ಓವರ್ ಟೇಕ್ ಮಾಡುವುದು, ಎದ್ವಾತದ್ವ ವಾಹನ ಚಲಾಯಿಸುವುದು ಇಲ್ಲಿನ ಅಪಘಾತಗಳಿಗೆ ಕಾರಣವಾಗಿದೆ….
ಕೆರೆ ಏರಿ ಮೇಲಿನ ರಸ್ತೆಯಲ್ಲಿ ಯಾವುದೇ ಸಂಚಾರಿ ನಿಯಮಗಳ ಸೂಚನ ಫಲಕಗಳು ಕಣ್ಮರೆಯಾಗಿವೆ. ರಸ್ತೆಯನ್ನು ಕಾಲಕ್ಕೆ ತಕ್ಕಂತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…