ನಿರಂತರ ಅನ್ನ ದಾಸೋಹ ಸೇವೆಗೆ ಸಾವಿರ ದಿನದ ಸಾರ್ಥಕತೆ

ಇಲ್ಲಿನ ದರ್ಗಾ ಜೋಗಹಳ್ಳಿಯಲ್ಲಿ ಸಮಾಜ ಸೇವಕ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಸೋಮವಾರಕ್ಕೆ 1003ನೇ ದಿನಕ್ಕೆ ಕಾಲಿರಿಸಿತು.

1003ನೇ ದಿನದ ಪ್ರಯುಕ್ತ ಅನ್ನದಾಸೋಹ ಸಮಿತಿಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಕೋವಿಡ್ ಅವಧಿಯಲ್ಲಿ ಸೋಂಕಿತರ ಪ್ರಾಣ ರಕ್ಷಣೆಗಾಗಿ ಶ್ರಮಿಸಿದ ಅಂಬುಲೆನ್ಸ್ ಚಾಲಕರು, ವೈದ್ಯರನ್ನು ಆತ್ಮೀಯವಾಗಿ ಶ್ರಮಿಸಲಾಯಿತು.

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ತುಮಕೂರಿನ ವರುಣ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿನಿ ಜಯತೇಷ್ಣಾ, ಡ್ರಾಮಾ ಜೂನಿಯರ್ ಸೀಸನ್-4 ಗೆ ಆಯ್ಕೆಯಾಗಿರುವ ಭೈರವಿ ಹಾಗೂ ಕಿರುತೆರೆ ಕಲಾವಿದೆ ರಾಜೇಶ್ವರಿ ಅವರನ್ನು ಸನ್ಮಾನಿಸಲಾಯಿತು.

ಚಿರ ಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ಸೇರಿ ಹಲವು ಗಣ್ಯರು ಬಡವರಿಗೆ ಅನ್ನದಾಸೋಹ ನೆರವೇರಿಸಿದರು. ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು. 55 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹೊದಿಕೆ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಗಾನಮಂಜರಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪರಿಸರವಾದಿ ಕೆ.ಗುರುದೇವ್, ಸಮಾಜ ಸೇವಕ ಹಾಗೂ ಬಿಎಂಟಿಸಿ ಬಸ್ ಚಾಲಕ ಸೆಲ್ವಂ, ಯೋಗಗುರು ಬಿ.ಜಿ.ಅಮರನಾಥ್, ಕನ್ನಡ ಜಾಗೃತಿ ವೇದಿಕೆ ತಾಲೂಕು ಅದ್ಯಕ್ಷ ನಾಗರಾಜ್, ಎ.ಸಿ.ಅಶೋಕ್, ಸೌಮ್ಯ, ಪಿ.ಸಿ.ಲಕ್ಷ್ಮಿನಾರಾಯಣ್, ಮನೋಜ್, ರತ್ನಮ್ಮ, ವರುಣ್ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago