ನಿರಂತರ ಅನ್ನ ದಾಸೋಹ ಸೇವೆಗೆ ಸಾವಿರ ದಿನದ ಸಾರ್ಥಕತೆ

ಇಲ್ಲಿನ ದರ್ಗಾ ಜೋಗಹಳ್ಳಿಯಲ್ಲಿ ಸಮಾಜ ಸೇವಕ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಸೋಮವಾರಕ್ಕೆ 1003ನೇ ದಿನಕ್ಕೆ ಕಾಲಿರಿಸಿತು.

1003ನೇ ದಿನದ ಪ್ರಯುಕ್ತ ಅನ್ನದಾಸೋಹ ಸಮಿತಿಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಕೋವಿಡ್ ಅವಧಿಯಲ್ಲಿ ಸೋಂಕಿತರ ಪ್ರಾಣ ರಕ್ಷಣೆಗಾಗಿ ಶ್ರಮಿಸಿದ ಅಂಬುಲೆನ್ಸ್ ಚಾಲಕರು, ವೈದ್ಯರನ್ನು ಆತ್ಮೀಯವಾಗಿ ಶ್ರಮಿಸಲಾಯಿತು.

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ತುಮಕೂರಿನ ವರುಣ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿನಿ ಜಯತೇಷ್ಣಾ, ಡ್ರಾಮಾ ಜೂನಿಯರ್ ಸೀಸನ್-4 ಗೆ ಆಯ್ಕೆಯಾಗಿರುವ ಭೈರವಿ ಹಾಗೂ ಕಿರುತೆರೆ ಕಲಾವಿದೆ ರಾಜೇಶ್ವರಿ ಅವರನ್ನು ಸನ್ಮಾನಿಸಲಾಯಿತು.

ಚಿರ ಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ಸೇರಿ ಹಲವು ಗಣ್ಯರು ಬಡವರಿಗೆ ಅನ್ನದಾಸೋಹ ನೆರವೇರಿಸಿದರು. ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು. 55 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹೊದಿಕೆ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಗಾನಮಂಜರಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪರಿಸರವಾದಿ ಕೆ.ಗುರುದೇವ್, ಸಮಾಜ ಸೇವಕ ಹಾಗೂ ಬಿಎಂಟಿಸಿ ಬಸ್ ಚಾಲಕ ಸೆಲ್ವಂ, ಯೋಗಗುರು ಬಿ.ಜಿ.ಅಮರನಾಥ್, ಕನ್ನಡ ಜಾಗೃತಿ ವೇದಿಕೆ ತಾಲೂಕು ಅದ್ಯಕ್ಷ ನಾಗರಾಜ್, ಎ.ಸಿ.ಅಶೋಕ್, ಸೌಮ್ಯ, ಪಿ.ಸಿ.ಲಕ್ಷ್ಮಿನಾರಾಯಣ್, ಮನೋಜ್, ರತ್ನಮ್ಮ, ವರುಣ್ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

2 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

15 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago