ಇಲ್ಲಿನ ದರ್ಗಾ ಜೋಗಹಳ್ಳಿಯಲ್ಲಿ ಸಮಾಜ ಸೇವಕ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಸೋಮವಾರಕ್ಕೆ 1003ನೇ ದಿನಕ್ಕೆ ಕಾಲಿರಿಸಿತು.
1003ನೇ ದಿನದ ಪ್ರಯುಕ್ತ ಅನ್ನದಾಸೋಹ ಸಮಿತಿಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಕೋವಿಡ್ ಅವಧಿಯಲ್ಲಿ ಸೋಂಕಿತರ ಪ್ರಾಣ ರಕ್ಷಣೆಗಾಗಿ ಶ್ರಮಿಸಿದ ಅಂಬುಲೆನ್ಸ್ ಚಾಲಕರು, ವೈದ್ಯರನ್ನು ಆತ್ಮೀಯವಾಗಿ ಶ್ರಮಿಸಲಾಯಿತು.
ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ತುಮಕೂರಿನ ವರುಣ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿನಿ ಜಯತೇಷ್ಣಾ, ಡ್ರಾಮಾ ಜೂನಿಯರ್ ಸೀಸನ್-4 ಗೆ ಆಯ್ಕೆಯಾಗಿರುವ ಭೈರವಿ ಹಾಗೂ ಕಿರುತೆರೆ ಕಲಾವಿದೆ ರಾಜೇಶ್ವರಿ ಅವರನ್ನು ಸನ್ಮಾನಿಸಲಾಯಿತು.
ಚಿರ ಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ಸೇರಿ ಹಲವು ಗಣ್ಯರು ಬಡವರಿಗೆ ಅನ್ನದಾಸೋಹ ನೆರವೇರಿಸಿದರು. ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು. 55 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹೊದಿಕೆ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಗಾನಮಂಜರಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಪರಿಸರವಾದಿ ಕೆ.ಗುರುದೇವ್, ಸಮಾಜ ಸೇವಕ ಹಾಗೂ ಬಿಎಂಟಿಸಿ ಬಸ್ ಚಾಲಕ ಸೆಲ್ವಂ, ಯೋಗಗುರು ಬಿ.ಜಿ.ಅಮರನಾಥ್, ಕನ್ನಡ ಜಾಗೃತಿ ವೇದಿಕೆ ತಾಲೂಕು ಅದ್ಯಕ್ಷ ನಾಗರಾಜ್, ಎ.ಸಿ.ಅಶೋಕ್, ಸೌಮ್ಯ, ಪಿ.ಸಿ.ಲಕ್ಷ್ಮಿನಾರಾಯಣ್, ಮನೋಜ್, ರತ್ನಮ್ಮ, ವರುಣ್ ಇತರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…