ನಿರಂತರ ಅನ್ನ ದಾಸೋಹ ಸೇವೆಗೆ ಸಾವಿರ ದಿನದ ಸಾರ್ಥಕತೆ

ಇಲ್ಲಿನ ದರ್ಗಾ ಜೋಗಹಳ್ಳಿಯಲ್ಲಿ ಸಮಾಜ ಸೇವಕ ಮಲ್ಲೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಅನ್ನದಾಸೋಹ ಸೋಮವಾರಕ್ಕೆ 1003ನೇ ದಿನಕ್ಕೆ ಕಾಲಿರಿಸಿತು.

1003ನೇ ದಿನದ ಪ್ರಯುಕ್ತ ಅನ್ನದಾಸೋಹ ಸಮಿತಿಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಕೋವಿಡ್ ಅವಧಿಯಲ್ಲಿ ಸೋಂಕಿತರ ಪ್ರಾಣ ರಕ್ಷಣೆಗಾಗಿ ಶ್ರಮಿಸಿದ ಅಂಬುಲೆನ್ಸ್ ಚಾಲಕರು, ವೈದ್ಯರನ್ನು ಆತ್ಮೀಯವಾಗಿ ಶ್ರಮಿಸಲಾಯಿತು.

ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ತುಮಕೂರಿನ ವರುಣ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿನಿ ಜಯತೇಷ್ಣಾ, ಡ್ರಾಮಾ ಜೂನಿಯರ್ ಸೀಸನ್-4 ಗೆ ಆಯ್ಕೆಯಾಗಿರುವ ಭೈರವಿ ಹಾಗೂ ಕಿರುತೆರೆ ಕಲಾವಿದೆ ರಾಜೇಶ್ವರಿ ಅವರನ್ನು ಸನ್ಮಾನಿಸಲಾಯಿತು.

ಚಿರ ಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ರವಿ ಮಾವಿನಕುಂಟೆ ಸೇರಿ ಹಲವು ಗಣ್ಯರು ಬಡವರಿಗೆ ಅನ್ನದಾಸೋಹ ನೆರವೇರಿಸಿದರು. ಮಕ್ಕಳಿಗೆ ನೋಟ್ ಬುಕ್ ಹಾಗೂ ಪೆನ್ ವಿತರಿಸಲಾಯಿತು. 55 ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಹೊದಿಕೆ ವಿತರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಗಾನಮಂಜರಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪರಿಸರವಾದಿ ಕೆ.ಗುರುದೇವ್, ಸಮಾಜ ಸೇವಕ ಹಾಗೂ ಬಿಎಂಟಿಸಿ ಬಸ್ ಚಾಲಕ ಸೆಲ್ವಂ, ಯೋಗಗುರು ಬಿ.ಜಿ.ಅಮರನಾಥ್, ಕನ್ನಡ ಜಾಗೃತಿ ವೇದಿಕೆ ತಾಲೂಕು ಅದ್ಯಕ್ಷ ನಾಗರಾಜ್, ಎ.ಸಿ.ಅಶೋಕ್, ಸೌಮ್ಯ, ಪಿ.ಸಿ.ಲಕ್ಷ್ಮಿನಾರಾಯಣ್, ಮನೋಜ್, ರತ್ನಮ್ಮ, ವರುಣ್ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

12 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago