ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 2023-24ನೇ ಸಾಲಿಗೆ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ” ಅರ್ಜಿ ಆಹ್ವಾನಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಗಳಿಂದ ನಿಗಧಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರ ಒಳಗಾಗಿ ಸಲ್ಲಿಸಲು ಕೋರಿದೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ.
1. ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು.
2. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್.
3. ಆದಾಯ ಪ್ರಮಾಣ ಪತ್ರ (ರೂ 11.500 ಮಿತಿಗೊಳಪಟ್ಟು) ಬಿ.ಪಿ.ಎಲ್, ಪಡಿತರ ಕಾರ್ಡ್.
4. ವಾಸಸ್ಥಳ ಪ್ರಮಾಣ ಪತ್ರ (ಕನಿಷ್ಠ ಹಿಂದಿನ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರುವ ಕುರಿತು ಸಂಬಂದಪಟ್ಟ ತಹಶೀಲ್ದಾರ ರವರಿಂದ ಪಡೆದಿರಬೇಕು).
5. ವಿಕಲಚೇತನ ವ್ಯಕ್ತಿಯ ಪೊಟೋ-1.
6. ಬ್ಯಾಂಕ್ ಪಾಸ್ ಪುಸ್ತಕ (ಅಂಚೆ ಕಛೇರಿ ಪಾಸ್ ಪುಸ್ತಕ ಹೊರತುಪಡಿಸಿ).
7. ಈಗಾಗಲೇ ಸದರಿ ಯೋಜನೆಯಡಿ ನೊಂದಾಯಿತರಲ್ಲದ ಬಗ್ಗೆ ದೃಢೀಕರಣ ಪತ್ರ.
8. ಫಲಾನುಭವಿಯ ಪಾಲಕರು/ಪೋಷಕರ ಹೆಸರು ಮತ್ತು ವಿಳಾಸ.
9. ಫಲಾನಿಭವಿಯ ವಿದ್ಯಾರ್ಹತೆ ಕುರಿತು ದೃಢೀಕರಣ (ಲಭ್ಯವಿದ್ದಲ್ಲಿ).
10. ನಿಗಧಿತ ಅರ್ಜಿ ನಮೂನೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳನ್ನು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787441 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…