ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 2023-24ನೇ ಸಾಲಿಗೆ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ” ಅರ್ಜಿ ಆಹ್ವಾನಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಬರುವ ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಗಳಿಂದ ನಿಗಧಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರ ಒಳಗಾಗಿ ಸಲ್ಲಿಸಲು ಕೋರಿದೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ವಿವರ.
1. ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು.
2. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್.
3. ಆದಾಯ ಪ್ರಮಾಣ ಪತ್ರ (ರೂ 11.500 ಮಿತಿಗೊಳಪಟ್ಟು) ಬಿ.ಪಿ.ಎಲ್, ಪಡಿತರ ಕಾರ್ಡ್.
4. ವಾಸಸ್ಥಳ ಪ್ರಮಾಣ ಪತ್ರ (ಕನಿಷ್ಠ ಹಿಂದಿನ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರುವ ಕುರಿತು ಸಂಬಂದಪಟ್ಟ ತಹಶೀಲ್ದಾರ ರವರಿಂದ ಪಡೆದಿರಬೇಕು).
5. ವಿಕಲಚೇತನ ವ್ಯಕ್ತಿಯ ಪೊಟೋ-1.
6. ಬ್ಯಾಂಕ್ ಪಾಸ್ ಪುಸ್ತಕ (ಅಂಚೆ ಕಛೇರಿ ಪಾಸ್ ಪುಸ್ತಕ ಹೊರತುಪಡಿಸಿ).
7. ಈಗಾಗಲೇ ಸದರಿ ಯೋಜನೆಯಡಿ ನೊಂದಾಯಿತರಲ್ಲದ ಬಗ್ಗೆ ದೃಢೀಕರಣ ಪತ್ರ.
8. ಫಲಾನುಭವಿಯ ಪಾಲಕರು/ಪೋಷಕರ ಹೆಸರು ಮತ್ತು ವಿಳಾಸ.
9. ಫಲಾನಿಭವಿಯ ವಿದ್ಯಾರ್ಹತೆ ಕುರಿತು ದೃಢೀಕರಣ (ಲಭ್ಯವಿದ್ದಲ್ಲಿ).
10. ನಿಗಧಿತ ಅರ್ಜಿ ನಮೂನೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಟ್ಟದ ವಿಕಲಚೇತನರ ನೋಡಲ್ ಅಧಿಕಾರಿಗಳನ್ನು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ-03 ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787441 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…