ನಿರಾಶ್ರಿತ ರೋಗ ಪೀಡಿತ ಹಿರಿಯ ನಾಗರಿಕ ವ್ಯಕ್ತಿಯ ರಕ್ಷಣೆ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಇವರಿಗೆ ಬಂದ ಸಾರ್ವಜನಿಕ ಕರೆಯ ಮೇರೆಗೆ ನಗರದ ವೀರಭದ್ರನ ಪಾಳ್ಯದಲ್ಲಿ ನಿರಾಶ್ರಿತರಾಗಿ ಹತ್ತು ದಿನಗಳಿಂದ ಊಟ-ವಸತಿ, ರಕ್ಷಣೆಯಿಲ್ಲದೆ ಗಾಳಿ -ಚಳಿಯಲ್ಲಿ ನಲುಗಿದ್ದಂತಹ ಹಿರಿಯ ನಾಗರಿಕ ವ್ಯಕ್ತಿಯನ್ನು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯರ ಸಹಾಯವಾಣಿ ,ಸನ್ನದ್ಧ ಟ್ರಸ್ಟ್ ನ ಸಮಯ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳ ಕಾಳಜಿಯ ಸಹಕಾರದೊಂದಿಗೆ ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ.

ಹಿರಿಯ ನಾಗರಿಕ ವ್ಯಕ್ತಿಯು ನನಗೆ ಮಕ್ಕಳು ಮೊಮ್ಮಕ್ಕಳು ಯಾರೂ ಇಲ್ಲ ಎಂದು ತಿಳಿಸಿದ್ದಾರೆ.
ವ್ಯಕ್ತಿಯು ಚೇತರಿಸಿಕೊಂಡ ನಂತರ ಪೋಷಕರು ದೊರೆತಲ್ಲಿ ಅವರ ಕುಟುಂಬಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ವ್ಯಕ್ತಿಯ ಗುರುತು ಬಲ್ಲವರು 9980860605 ನನಗೆ ನೇರವಾಗಿ ಕರೆ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಈ ರೀತಿಯ ಇನ್ನೂರಕ್ಕೂ ಹೆಚ್ಚು ನಿರಾಶ್ರಿತ ಹಿರಿಯ ನಾಗರಿಕ ಹಾಗೂ ಮಾನಸಿಕ ಖಿನ್ನತೆಗೊಳಗಾದವರನ್ನು ರಕ್ಷಿಸಿ ಪುನರ್ವಸತಿ ಗೊಳಿಸಿರುವುದು ಇಲಾಖೆಯ ಹೆಮ್ಮೆಯ ವಿಚಾರವಾಗಿದೆ.

ರಕ್ಷಣಾ ಕಾರ್ಯದಲ್ಲಿ ಇಲಾಖೆಯ ಜೊತೆ ಸಹಕಾರಿಯಾದ ಸನ್ನದ್ಧ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಎನ್ , ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ಸಂಯೋಜಕರಾದ ಸುರೇಶ್ , ದೊಡ್ಡಬಳ್ಳಾಪುರ ನಗರ ಪುನರ್ವಸತಿ ಕಾರ್ಯಕರ್ತರಾದ ವಿನಯ್ ಕುಮಾರ್, ಮಂಜುನಾಥ್, ರವಿಕುಮಾರ್ , ಸಮಾಜಸೇವಕ ಕೊಯಿರ ಕೃಷ್ಣಪ್ಪ ಹಾಜರಿದ್ದರು.

ಸಂಕಷ್ಟದಲ್ಲಿ ಸಿಲುಕಿದೆ ಹಿರಿಯ ನಾಗರಿಕರನ್ನು ಎಲ್ಲಾ ಸಂದರ್ಭದಲ್ಲಿ ರಕ್ಷಿಸಲು ಇಲಾಖೆ ಬದ್ದವಾಗಿದ್ದು ಮೌಲ್ಯಯುತ ಸಮಾಜದಲ್ಲಿ ಈ ರೀತಿ ಹಿರಿಯ ನಾಗರಿಕರನ್ನು ನಿರಾಶ್ರಿತರನ್ನಾಗಿ ಮಾಡುವುದು ಸರಿಯಲ್ಲ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ,ಯಾವುದೇ ಹಿರಿಯ ನಾಗರಿಕರಿಗೆ ಆಶ್ರಯ ರಕ್ಷಣೆ ಮತ್ತು ಪೋಷಣೆಯ ಅವಶ್ಯಕತೆ ಕಂಡುಬಂದರೆ ತಕ್ಷಣವೇ ಹಿರಿಯ ನಾಗರಿಕರ ರಾಷ್ಟ್ರೀಯ ಸಹಾಯವಾಣಿ 14567 ಹಾಗೂ ಹಿರಿಯ ನಾಗರಿಕರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯವಾಣಿಗೆ 1090ಗೆ ಕರೆ ಮಾಡಬಹುದಾಗಿದೆ”. ಎಂದು ಇಲಾಖೆ ಪ್ರಕಟಿಸಿದೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

12 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

17 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

17 hours ago