ನಿರಾಶ್ರಿತ ರೋಗ ಪೀಡಿತ ಹಿರಿಯ ನಾಗರಿಕ ವ್ಯಕ್ತಿಯ ರಕ್ಷಣೆ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಇವರಿಗೆ ಬಂದ ಸಾರ್ವಜನಿಕ ಕರೆಯ ಮೇರೆಗೆ ನಗರದ ವೀರಭದ್ರನ ಪಾಳ್ಯದಲ್ಲಿ ನಿರಾಶ್ರಿತರಾಗಿ ಹತ್ತು ದಿನಗಳಿಂದ ಊಟ-ವಸತಿ, ರಕ್ಷಣೆಯಿಲ್ಲದೆ ಗಾಳಿ -ಚಳಿಯಲ್ಲಿ ನಲುಗಿದ್ದಂತಹ ಹಿರಿಯ ನಾಗರಿಕ ವ್ಯಕ್ತಿಯನ್ನು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯರ ಸಹಾಯವಾಣಿ ,ಸನ್ನದ್ಧ ಟ್ರಸ್ಟ್ ನ ಸಮಯ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳ ಕಾಳಜಿಯ ಸಹಕಾರದೊಂದಿಗೆ ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ.

ಹಿರಿಯ ನಾಗರಿಕ ವ್ಯಕ್ತಿಯು ನನಗೆ ಮಕ್ಕಳು ಮೊಮ್ಮಕ್ಕಳು ಯಾರೂ ಇಲ್ಲ ಎಂದು ತಿಳಿಸಿದ್ದಾರೆ.
ವ್ಯಕ್ತಿಯು ಚೇತರಿಸಿಕೊಂಡ ನಂತರ ಪೋಷಕರು ದೊರೆತಲ್ಲಿ ಅವರ ಕುಟುಂಬಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ವ್ಯಕ್ತಿಯ ಗುರುತು ಬಲ್ಲವರು 9980860605 ನನಗೆ ನೇರವಾಗಿ ಕರೆ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಈ ರೀತಿಯ ಇನ್ನೂರಕ್ಕೂ ಹೆಚ್ಚು ನಿರಾಶ್ರಿತ ಹಿರಿಯ ನಾಗರಿಕ ಹಾಗೂ ಮಾನಸಿಕ ಖಿನ್ನತೆಗೊಳಗಾದವರನ್ನು ರಕ್ಷಿಸಿ ಪುನರ್ವಸತಿ ಗೊಳಿಸಿರುವುದು ಇಲಾಖೆಯ ಹೆಮ್ಮೆಯ ವಿಚಾರವಾಗಿದೆ.

ರಕ್ಷಣಾ ಕಾರ್ಯದಲ್ಲಿ ಇಲಾಖೆಯ ಜೊತೆ ಸಹಕಾರಿಯಾದ ಸನ್ನದ್ಧ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಎನ್ , ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ಸಂಯೋಜಕರಾದ ಸುರೇಶ್ , ದೊಡ್ಡಬಳ್ಳಾಪುರ ನಗರ ಪುನರ್ವಸತಿ ಕಾರ್ಯಕರ್ತರಾದ ವಿನಯ್ ಕುಮಾರ್, ಮಂಜುನಾಥ್, ರವಿಕುಮಾರ್ , ಸಮಾಜಸೇವಕ ಕೊಯಿರ ಕೃಷ್ಣಪ್ಪ ಹಾಜರಿದ್ದರು.

ಸಂಕಷ್ಟದಲ್ಲಿ ಸಿಲುಕಿದೆ ಹಿರಿಯ ನಾಗರಿಕರನ್ನು ಎಲ್ಲಾ ಸಂದರ್ಭದಲ್ಲಿ ರಕ್ಷಿಸಲು ಇಲಾಖೆ ಬದ್ದವಾಗಿದ್ದು ಮೌಲ್ಯಯುತ ಸಮಾಜದಲ್ಲಿ ಈ ರೀತಿ ಹಿರಿಯ ನಾಗರಿಕರನ್ನು ನಿರಾಶ್ರಿತರನ್ನಾಗಿ ಮಾಡುವುದು ಸರಿಯಲ್ಲ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ,ಯಾವುದೇ ಹಿರಿಯ ನಾಗರಿಕರಿಗೆ ಆಶ್ರಯ ರಕ್ಷಣೆ ಮತ್ತು ಪೋಷಣೆಯ ಅವಶ್ಯಕತೆ ಕಂಡುಬಂದರೆ ತಕ್ಷಣವೇ ಹಿರಿಯ ನಾಗರಿಕರ ರಾಷ್ಟ್ರೀಯ ಸಹಾಯವಾಣಿ 14567 ಹಾಗೂ ಹಿರಿಯ ನಾಗರಿಕರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯವಾಣಿಗೆ 1090ಗೆ ಕರೆ ಮಾಡಬಹುದಾಗಿದೆ”. ಎಂದು ಇಲಾಖೆ ಪ್ರಕಟಿಸಿದೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago