ನಿರಾಶ್ರಿತ ರೋಗ ಪೀಡಿತ ಹಿರಿಯ ನಾಗರಿಕ ವ್ಯಕ್ತಿಯ ರಕ್ಷಣೆ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಇವರಿಗೆ ಬಂದ ಸಾರ್ವಜನಿಕ ಕರೆಯ ಮೇರೆಗೆ ನಗರದ ವೀರಭದ್ರನ ಪಾಳ್ಯದಲ್ಲಿ ನಿರಾಶ್ರಿತರಾಗಿ ಹತ್ತು ದಿನಗಳಿಂದ ಊಟ-ವಸತಿ, ರಕ್ಷಣೆಯಿಲ್ಲದೆ ಗಾಳಿ -ಚಳಿಯಲ್ಲಿ ನಲುಗಿದ್ದಂತಹ ಹಿರಿಯ ನಾಗರಿಕ ವ್ಯಕ್ತಿಯನ್ನು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯರ ಸಹಾಯವಾಣಿ ,ಸನ್ನದ್ಧ ಟ್ರಸ್ಟ್ ನ ಸಮಯ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳ ಕಾಳಜಿಯ ಸಹಕಾರದೊಂದಿಗೆ ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ.

ಹಿರಿಯ ನಾಗರಿಕ ವ್ಯಕ್ತಿಯು ನನಗೆ ಮಕ್ಕಳು ಮೊಮ್ಮಕ್ಕಳು ಯಾರೂ ಇಲ್ಲ ಎಂದು ತಿಳಿಸಿದ್ದಾರೆ.
ವ್ಯಕ್ತಿಯು ಚೇತರಿಸಿಕೊಂಡ ನಂತರ ಪೋಷಕರು ದೊರೆತಲ್ಲಿ ಅವರ ಕುಟುಂಬಕ್ಕೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ವ್ಯಕ್ತಿಯ ಗುರುತು ಬಲ್ಲವರು 9980860605 ನನಗೆ ನೇರವಾಗಿ ಕರೆ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಈ ರೀತಿಯ ಇನ್ನೂರಕ್ಕೂ ಹೆಚ್ಚು ನಿರಾಶ್ರಿತ ಹಿರಿಯ ನಾಗರಿಕ ಹಾಗೂ ಮಾನಸಿಕ ಖಿನ್ನತೆಗೊಳಗಾದವರನ್ನು ರಕ್ಷಿಸಿ ಪುನರ್ವಸತಿ ಗೊಳಿಸಿರುವುದು ಇಲಾಖೆಯ ಹೆಮ್ಮೆಯ ವಿಚಾರವಾಗಿದೆ.

ರಕ್ಷಣಾ ಕಾರ್ಯದಲ್ಲಿ ಇಲಾಖೆಯ ಜೊತೆ ಸಹಕಾರಿಯಾದ ಸನ್ನದ್ಧ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಎನ್ , ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ಸಂಯೋಜಕರಾದ ಸುರೇಶ್ , ದೊಡ್ಡಬಳ್ಳಾಪುರ ನಗರ ಪುನರ್ವಸತಿ ಕಾರ್ಯಕರ್ತರಾದ ವಿನಯ್ ಕುಮಾರ್, ಮಂಜುನಾಥ್, ರವಿಕುಮಾರ್ , ಸಮಾಜಸೇವಕ ಕೊಯಿರ ಕೃಷ್ಣಪ್ಪ ಹಾಜರಿದ್ದರು.

ಸಂಕಷ್ಟದಲ್ಲಿ ಸಿಲುಕಿದೆ ಹಿರಿಯ ನಾಗರಿಕರನ್ನು ಎಲ್ಲಾ ಸಂದರ್ಭದಲ್ಲಿ ರಕ್ಷಿಸಲು ಇಲಾಖೆ ಬದ್ದವಾಗಿದ್ದು ಮೌಲ್ಯಯುತ ಸಮಾಜದಲ್ಲಿ ಈ ರೀತಿ ಹಿರಿಯ ನಾಗರಿಕರನ್ನು ನಿರಾಶ್ರಿತರನ್ನಾಗಿ ಮಾಡುವುದು ಸರಿಯಲ್ಲ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ,ಯಾವುದೇ ಹಿರಿಯ ನಾಗರಿಕರಿಗೆ ಆಶ್ರಯ ರಕ್ಷಣೆ ಮತ್ತು ಪೋಷಣೆಯ ಅವಶ್ಯಕತೆ ಕಂಡುಬಂದರೆ ತಕ್ಷಣವೇ ಹಿರಿಯ ನಾಗರಿಕರ ರಾಷ್ಟ್ರೀಯ ಸಹಾಯವಾಣಿ 14567 ಹಾಗೂ ಹಿರಿಯ ನಾಗರಿಕರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯವಾಣಿಗೆ 1090ಗೆ ಕರೆ ಮಾಡಬಹುದಾಗಿದೆ”. ಎಂದು ಇಲಾಖೆ ಪ್ರಕಟಿಸಿದೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

6 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

7 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

8 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

11 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

21 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago