ಕೋಲಾರ: ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ನೇತೃತ್ವದ ಶ್ರೀ ಮಂಜುನಾಥೇಶ್ವರ ವಿವಿಧೋದ್ದೇಶ ಸಂಸ್ಥೆ ಹಾಗೂ ಖಾದಿ ಗ್ರಾಮೋದ್ಯೋಗ ಆಯೋಗ ಕೆವಿಐಸಿಯ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ, ಬೆಂಗಳೂರಿನಲ್ಲಿ ಉಚಿತ ಹಣ್ಣು ಮತ್ತು ತರಕಾರಿ ಸಂಸ್ಕರಣಾ ಯಂತ್ರಗಳು ಹಾಗೂ ವಿದ್ಯುತ್ ಚಾಲಿತ ತಿಗರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ವಿವಿಧೋದ್ದೇಶ ಸಂಸ್ಥೆಯ ಕಾರ್ಯದರ್ಶಿ ಡಾ.ಸಹನಾ ಮಾತನಾಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರಗಳು ಉಚಿತವಾಗಿ ನೀಡುವ ಯಂತ್ರಗಳನ್ನು ಸದುಪಯೋಗ ಮಾಡಿಕೊಂಡು, ಅದರಿಂದಾಗಿ ಚಿಕ್ಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿಕೊಂಡು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಅವರು ಕೂಡ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಎಂಎಸ್ಎಂಇ ಹಾಗೂ ಕೆವಿಐಸಿಯ ವತಿಯಿಂದ ತರಬೇತಿ ಪಡೆದ ಯುವಕ ಯುವಕರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೆವಿಐಸಿ ಕೇಂದ್ರದ ಮುಖ್ಯಸ್ಥ ಮನೋಜ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೆವಿಐಸಿ ರಾಜ್ಯ ನಿರ್ದೇಶಕ ಇಟ್ಟ ಮೋಹನ್ ರಾವ್, ದಕ್ಷಿಣ ಭಾರತ ಕುಂಬಾರ ಫೆಡರೇಶನ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಕೆ.ನಾಗರಾಜ್ ಹಾಗೂ ಕೆವಿಐಸಿಯ ಅಧಿಕಾರಿಗಳು, ಕುಂಬಾರ ಸಮುದಾಯದ ಮುಖಂಡರು ಇದ್ದರು
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…