ಕೋಲಾರ: ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ನೇತೃತ್ವದ ಶ್ರೀ ಮಂಜುನಾಥೇಶ್ವರ ವಿವಿಧೋದ್ದೇಶ ಸಂಸ್ಥೆ ಹಾಗೂ ಖಾದಿ ಗ್ರಾಮೋದ್ಯೋಗ ಆಯೋಗ ಕೆವಿಐಸಿಯ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ, ಬೆಂಗಳೂರಿನಲ್ಲಿ ಉಚಿತ ಹಣ್ಣು ಮತ್ತು ತರಕಾರಿ ಸಂಸ್ಕರಣಾ ಯಂತ್ರಗಳು ಹಾಗೂ ವಿದ್ಯುತ್ ಚಾಲಿತ ತಿಗರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ವಿವಿಧೋದ್ದೇಶ ಸಂಸ್ಥೆಯ ಕಾರ್ಯದರ್ಶಿ ಡಾ.ಸಹನಾ ಮಾತನಾಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರಗಳು ಉಚಿತವಾಗಿ ನೀಡುವ ಯಂತ್ರಗಳನ್ನು ಸದುಪಯೋಗ ಮಾಡಿಕೊಂಡು, ಅದರಿಂದಾಗಿ ಚಿಕ್ಕ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿಕೊಂಡು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಅವರು ಕೂಡ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಎಂಎಸ್ಎಂಇ ಹಾಗೂ ಕೆವಿಐಸಿಯ ವತಿಯಿಂದ ತರಬೇತಿ ಪಡೆದ ಯುವಕ ಯುವಕರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೆವಿಐಸಿ ಕೇಂದ್ರದ ಮುಖ್ಯಸ್ಥ ಮನೋಜ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕೆವಿಐಸಿ ರಾಜ್ಯ ನಿರ್ದೇಶಕ ಇಟ್ಟ ಮೋಹನ್ ರಾವ್, ದಕ್ಷಿಣ ಭಾರತ ಕುಂಬಾರ ಫೆಡರೇಶನ್ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಕೆ.ನಾಗರಾಜ್ ಹಾಗೂ ಕೆವಿಐಸಿಯ ಅಧಿಕಾರಿಗಳು, ಕುಂಬಾರ ಸಮುದಾಯದ ಮುಖಂಡರು ಇದ್ದರು
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…