Categories: Crime

ನಿರುದ್ಯೋಗ ಯುವಕ-ಯುವತಿಯರೇ ಹುಷಾರ್….! ವಂಚಕರು ಹೊಂಚಾಕಿ ಕಾಯುತ್ತಿದ್ದಾರೆ…..! ಯಾಮಾರಿದ್ರೆ ಉದ್ಯೋಗವೂ ಇಲ್ಲ, ಹಣವೂ ಇಲ್ಲ….!

ವಿಧಾನಸೌಧ, ಆ ಇಲಾಖೆ, ಈ ಆಫೀಸ್ ಹೀಗೆ… ಅಲ್ಲಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ‌ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ಹೇಳಿ ಅಮಾಯಕ ನಿರುದ್ಯೋಗಿಗಳಿಗೆ ನಂಬಿಸಿ‌ ಹಣ ಪೀಕಿ ಯಾಮಾರಿಸುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ…

ವಂಚನೆಕೋರರಿಗೆ ಬಡವರು, ನಿರುದ್ಯೋಗ ಯುವಕ-ಯುವತಿಯರೇ ಟಾರ್ಗೆಟ್. ಮೊಬೈಲ್‌ ನಂಬರ್ ಅಥವಾ ಇ-ಮೇಲ್ ಐಡಿ‌ ಸಿಕ್ಕಿದ್ರೆ ಸಾಕು ನೇರವಾಗಿ ಫೋನ್ ಅಥವಾ ಮೆಸೇಜ್ ಬರುತ್ತೆ. ಇಲ್ಲದಿದ್ದರೆ ನಿಮಗೆ ಪರಿಚಯಸ್ಥರ ಮೊಬೈಲ್ ಗೆ ಕರೆ ಮಾಡಿ ಅವರ ಮೂಲಕ ನಿಮಗೆ ಕರೆ ಮಾಡಿಸುತ್ತಾರೆ. ಆಗ ನಿಮ್ಮ ಪರಿಚಯಸ್ಥರು ನಿಮಗೆ ಫೋನ್ ಮಾಡಿ‌ ಕೆಲಸ ಇದೆ ನೋಡಿ, ಒಬ್ಬರ ಮೊಬೈಲ್ ನಂಬರ್ ಕೊಡ್ತೀನಿ ಮಾತಾಡಿ ಎಂದು ಹೇಳುತ್ತಾರೆ. ಆಗ ನೀವು ಆ ಮೊಬೈಲ್ ನಂಬರ್ ಪಡೆದು ಅಥವಾ ವಂಚನೆಕೋರರೇ ನೇರವಾಗಿ ನಿಮ್ಮ ಮೊಬೈಲ್ ಪಡೆದು ಮೋಸ ಮಾಡೊದಕ್ಕೆ ಶುರು ಮಾಡುತ್ತಾರೆ.

ನಿಮ್ಮ ಫೋನ್ ನಂಬರ್ ಸಿಕ್ಕಿದ ಕೂಡಲೇ ನೇರವಾಗಿ ವಾಟ್ಸಾಪ್ ಮೂಲಕ‌ Hi ಮಾಡಿ, ಕರೆ ಮಾಡುತ್ತಾರೆ. ಕರೆ ಮಾಡಿ ನಾನು ಮಂತ್ರಿ ಕಡೆಯವರು ಅಥವಾ ಕೆಪಿಎಸ್ಸಿಯಲ್ಲಿ ಕೆಲಸ ಮಾಡುತ್ತೇನೆ. ಹೀಗೆ ನಾನಾ ರೀತಿಯಾಗಿ ಹೇಳಿ, ಮಂತ್ರಿ‌ಗಳ ಕೋಟಾದಡಿ ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಬಡವರನ್ನು ನೇಮಕ ಮಾಡಲಾಗುತ್ತಿದೆ.‌ ನಿಮಗೆ ಆಸಕ್ತಿ ಇದ್ದಲ್ಲಿ ನಾವು ಹೇಳಿದ ದಾಖಲಾತಿಗಳನ್ನು ಪಿಡಿಎಫ್ ಮೂಲಕ ವಾಟ್ಸಾಪ್ ಮಾಡಬೇಕು. ನಾವು ಯಾರಿದಂಲೂ ಒಂದು ರೂಪಾಯಿ ಹಣ ಪಡೆಯುವುದಿಲ್ಲ. ಕೆಲಸ ಸಿಕ್ಕಿದ ಮೇಲೆ ನಮಗೆ ಕೆಟ್ಟ ಹೆಸರು ತರಬಾರದು. ಮೊದಲು ಕೆಲಸಕ್ಕೆ ಸೇರೋದು ನಿಮ್ಮ ತಂದೆ-ತಾಯಿಗೆ ಇಷ್ಷ ಇದಿಯಾ…? ನಿಮ್ಮ ತಂದೆ- ತಾಯಿಯ ಒಪ್ಪಿಗೆ ಪಡೆದು ನಮಗೆ ತಿಳಿಸಿ ಎಂದು ನಂಬಿಸುತ್ತಾರೆ. ಒಂದು ವೇಳೆ ಎಲ್ಲರ ಒಪ್ಪಿಗೆ ಇದೆ ಎಂದು ತಿಳಿಸಿದರೆ ಸಾಕು ಅಲ್ಲಿಂದ ನಿಮಗೆ ಟಾರ್ಚರ್ ಶುರುವಾಗುತ್ತದೆ.

ವಂಚನೆಕೋರರು ಯಾವುದೇ ಕಾರಣಕ್ಕೂ ಹುದ್ದೆಗೆ ಸಂಬಂಧಿಸಿದ ಅಧಿಕೃತ ನೇಮಕಾತಿ ನೋಟಿಫಿಕೇಶನ್, ಪೇಪರ್ ಸ್ಟೇಟ್ ಮೆಂಟ್ ಸೇರಿದಂತೆ ಯಾವುದನ್ನೂ ನಿಮಗೆ ಕಳಿಸುವುದಿಲ್ಲ. ಹಾಗೇ ನಿಮಗೆ ಎಲ್ಲಿಯೂ ಸಹ ಅವರ ಮೇಲೆ ಅನುಮಾನ ಬರದ ಹಾಗೇ ಮಾತನಾಡುತ್ತಾರೆ. ನೀವು ಬೇರೆಯವರ ಬಳಿ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆಹಾಕುವುದಕ್ಕೂ ಬಿಡದೇ ನಿಮಗೆ ಅವರ ಮೂಲಕ‌ ಪದೇಪದೇ ಕರೆಗಳು ಬರುತ್ತಿರುತ್ತವೆ.

ನೀವು ವಾಟ್ಸಾಪ್ ಮೂಲಕ ಕೆವೈಸಿ ದಾಖಲೆಗಳು, ಮಾರ್ಕ್ಸ್ ಕಾರ್ಡ್, ಇ-ಮೇಲ್ ಐಡಿ, ಫೋಟೋ, ಸಹಿ ಕಳುಹಿಸಿದ್ದರೂ ಸಹ ನಿಮಗೆ‌ ಮತ್ತೆ ಕರೆ ಮಾಡಿ ನಿಮ್ಮ ಹೆಸರು, ಮೊಬೈಲ್ ನಂಬರ್ ಮಾರ್ಕ್ಸ್, ರಿಜಿಸ್ಟರ್ ನಂಬರ್ ಸೇರಿದಂತೆ ಎಲ್ಲವೂ ಕೇಳಿ ಅವರೇ ಕಂಪ್ಯೂಟರ್ ನಲ್ಲಿ ನಮೂದಿಸುವ ನಾಟಕ ಮಾಡುತ್ತಾರೆ‌. ಈ ಹುದ್ದೆಗೆ ಮೂರರಿಂದ ನಾಲ್ಕು ಲಕ್ಷವಾಗುತ್ತದೆ. ಆದರೆ, ನಾನು ನಿಮ್ಮ ಬಳಿ ಒಂದು ರೂಪಾಯಿ ಕೂಡ ಪಡೆಯುವುದಿಲ್ಲ. ನನಗೆ ಅದು ಬೇಕಾಗುವುದಿಲ್ಲ‌ ಎಂದು ನಂಬಿಸುತ್ತಾರೆ‌.

ಇಷ್ಟೆಲ್ಲಾ ಆದ ಮೇಲೆ ಇಲ್ಲಿಂದ ಈಚೆಗೆ ಹಣ ಕೇಳೋದಕ್ಕೆ ಶುರು ಮಾಡುತ್ತಾರೆ. ಅಪ್ಲಿಕೇಷನ್ ಫೀಜ್ ಇಷ್ಟಾಗುತ್ತೆ, ಅಧಿಕಾರಿಗಳು ಸಹಿ ಹಾಕಲು ಅಷ್ಟು ಆಗುತ್ತದೆ ಹೀಗೆ ಬೇರೆ ಬೇರೆ ಕೆಲಸಗಳಿಗೆ ಹಣ ಹಾಗುತ್ತದೆ ಎಂದು ಹೇಳಿ ಹಂತಹಂತವಾಗಿ ಹಣ ಪೀಕಲು ಮುಂದಾಗುತ್ತಾರೆ‌. ಫೋನ್ ಪೇ, ಗೂಗಲ್ ಪೇ‌ ಮಾಡಿಸಿಕೊಳ್ಳುವುದಿಲ್ಲ. ಮನಿ ಟ್ರಾನ್ಸ್ ಫರ್ ಮಾಡಿ ಎಂದು ಪ್ರೈವೆಟ್ ಬ್ಯಾಂಕ್ ಅಕೌಂಟ್ ನಂಬರ್ ಕಳುಹಿಸುತ್ತಾರೆ. ಹಣ ಹಾಕುವುದು ತಡ ಮಾಡಬಾರದು ಕೆಲಸ ಆಗಲ್ಲ. ನೀವು ಹಾಕುವ ಹಣ ಮತ್ತೆ ನಿಮಗೆ ವಾಪಸ್ ಬರುತ್ತೆ, ಯಾವುದೇ ಕಾರಣಕ್ಕೂ ಹೆದರಬೇಡಿ ಎಂದು ನಂಬಿಸುತ್ತಾರೆ.

ಹಣ ಹಾಕೋವರೆಗೂ ಫೋನ್ ಕಟ್ ಮಾಡದೇ ನಮ್ಮ ಬಳಿ ಮಾತಾಡುತ್ತಿರುತ್ತಾರೆ. ಹಣ ಕಳುಹಿಸಿರುವುದು ದೃಢಪಡಿಸಿಕೊಂಡು ಫೋನ್ ಕಟ್ ಮಾಡುತ್ತಾರೆ.

ಆಮೇಲೆ ಅವರೇ ಒಂದು ದಿನಾಂಕ ನಿಗದಿ ಮಾಡಿ ಇಂತಾ ದಿನಾಂಕದಂದು ನಿಮ್ಮ ಪೋಷಕರೊಡನೆ ಎಲ್ಲಾ ಮೂಲ ದಾಖಲಾತಿಗಳನ್ನು ತೆಗೆದುಕೊಂಡು ವಿಧಾನಸೌಧಕ್ಕೆ ಅಥವಾ ಸಂಬಂಧಪಟ್ಟ ಇಲಾಖೆ, ಆಫೀಸ್ ಬಳಿ ಬಂದು ಅಧಿಕೃತ ನೇಮಕಾತಿ ಪ್ರತಿಯನ್ನು ಪಡೆದುಕೊಳ್ಳಿ ಎಂದು ತಿಳಿಸುತ್ತಾರೆ.

ಇಷ್ಟೆಲ್ಲಾ ಆದಮೇಲೆ ಒಂದು ವೇಳೆ ನೀವು ಇದಕ್ಕೆ ಅನುಮಾನಗೊಂಡು ಪ್ರಶ್ನೆ ಮಾಡೋದಕ್ಕೆ ಹೋಗಿ, ನಮಗೆ ಯಾವ ಹುದ್ದೆ ಬೇಡ ನಾವು ಕೊಟ್ಟಿರುವ ಹಣ ನಮಗೆ ವಾಪಸ್ ಮಾಡಿ ಎಂದಾಗ ಆಗ ಆ ಧಗಾಕೋರರು ಆಯ್ತು ಹಣ ವಾಪಸ್ ಮಾಡ್ತೀವಿ ಅಂತ ಹೇಳುತ್ತಾರೆ ಅಷ್ಟೆ. ಅಲ್ಲಿಂದಾಚೆಗೆ, ಅವರಿಗೆ ನೀವು ಎಷ್ಟು ಫೋನ್ ಮಾಡಿದರೂ ನಿಮ್ಮ ಫೋನ್ ಸ್ವೀಕರಿಸುವುದಿಲ್ಲ.

ಆದ್ದರಿಂದ, ಯಾರೂ ಸಹ ಇಂತಹ ವಂಚಕರಿಂದ ಮೋಸ ಹೋಗದೇ ಜಾಗೃತರಾಗಿರಬೇಕು. ವಂಚಕರಿಂದ ಫೋನ್ ಕರೆ ಬಂದರೆ ಕೂಡಲೇ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು. ಪೊಲೀಸ್ ಇಲಾಖೆಯು ಇಂತಹ ವಂಚಕರ ಮೇಲೆ ನಿಗಾ ಇಡಬೇಕು. ಒಂದು ವೇಳೆ‌ ವಂಚಕರ ವಿರುದ್ಧ ದೂರು ಬಂದಲ್ಲಿ ಕೂಡಲೇ ವಂಚಕರನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಕಾನೂನಿನ ಶಿಕ್ಷೆ ವಿಧಿಸಿ ಮುಂದೆ ಈ ರೀತಿ ಯಾರಿಗೂ ಮೋಸ‌ಕ್ಕೆ ಒಳಗಾಗದ ರೀತಿ ನೋಡಿಕೊಳ್ಳಬೇಕು……

Ramesh Babu

Journalist

Recent Posts

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

55 minutes ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

8 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

18 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

18 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

23 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago