ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.
ಹಾಡೋನಹಳ್ಳಿಯ ಖಾಸಗಿ ಲೇಔಟ್ನ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು. ಹುಡುಕಾಟ ನಡೆಸಿದ್ದು ಸುಮಾರು 5 ದಿನಗಳ ಮಗುವನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದರು.
ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ನಗರದ ತಾಯಿ-ಮಗು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ನಿತ್ರಾಣವಾಗಿದ್ದ ಮಗುವಿಗೆ ಸೂಕ್ತ ಆರೈಕೆ, ಚಿಕಿತ್ಸೆ ನೀಡಿದ ಸರ್ಕಾರಿ ತಾಯಿ ಮಗು ಆಸ್ಪತ್ರೆ ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ಮಗುವಿನ ಜೀವ ಉಳಿಸಿದ್ದಾರೆ.
ನವಜಾತ ಗಂಡು ಮಗು 1 ಕೆ.ಜಿ 800 ಗ್ರಾಂ ತೂಕವಿದ್ದು, ಮಗುವಿನ ಜೀವ ಉಳಿಸುವುದು ಸವಾಲಿನ ಕಾರ್ಯವಾಗಿತ್ತು. ಆಸ್ಪತ್ರೆಯಲ್ಲಿ ಪ್ರಸೂತಿಯಾಗಿದ್ದ ತಾಯಂದಿರಿಗೆ ಮನವಿ ಮಾಡಿ ಮಗುವಿಗೆ ಹಾಲುಣಿಸಲು ಒಪ್ಪಿಸಿದ್ದು, ಜೊತೆ ಪೌಡರ್ ಹಾಲನ್ನು ಕೂಡ ಮಗುವಿಗೆ ಕುಡಿಸಲಾಗುತ್ತಿದೆ ಎಂದು ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ತಿಳಿಸಿದರು.
ಕಳೆದ ಒಂದು ವಾರದಿಂದ ಹಾರೈಕೆ ಮಾಡಿದ ವೈದ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಕಾರ್ಯಕರ್ತೆ ಹೇಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವ ಅಧಿಕಾರಿಗಳು ದತ್ತು ಪಡೆಯಲು ಅರ್ಜಿ ಸಲ್ಲಿಸಿರುವ ಪೋಷಕರಿಗೆ ಈ ಮಗುವನ್ನು ಹಸ್ತಾಂತರ ಮಾಡಲಿದ್ದಾರೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…