ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.
ಹಾಡೋನಹಳ್ಳಿಯ ಖಾಸಗಿ ಲೇಔಟ್ನ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು. ಹುಡುಕಾಟ ನಡೆಸಿದ್ದು ಸುಮಾರು 5 ದಿನಗಳ ಮಗುವನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದರು.
ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ನಗರದ ತಾಯಿ-ಮಗು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ನಿತ್ರಾಣವಾಗಿದ್ದ ಮಗುವಿಗೆ ಸೂಕ್ತ ಆರೈಕೆ, ಚಿಕಿತ್ಸೆ ನೀಡಿದ ಸರ್ಕಾರಿ ತಾಯಿ ಮಗು ಆಸ್ಪತ್ರೆ ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ಮಗುವಿನ ಜೀವ ಉಳಿಸಿದ್ದಾರೆ.
ನವಜಾತ ಗಂಡು ಮಗು 1 ಕೆ.ಜಿ 800 ಗ್ರಾಂ ತೂಕವಿದ್ದು, ಮಗುವಿನ ಜೀವ ಉಳಿಸುವುದು ಸವಾಲಿನ ಕಾರ್ಯವಾಗಿತ್ತು. ಆಸ್ಪತ್ರೆಯಲ್ಲಿ ಪ್ರಸೂತಿಯಾಗಿದ್ದ ತಾಯಂದಿರಿಗೆ ಮನವಿ ಮಾಡಿ ಮಗುವಿಗೆ ಹಾಲುಣಿಸಲು ಒಪ್ಪಿಸಿದ್ದು, ಜೊತೆ ಪೌಡರ್ ಹಾಲನ್ನು ಕೂಡ ಮಗುವಿಗೆ ಕುಡಿಸಲಾಗುತ್ತಿದೆ ಎಂದು ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ತಿಳಿಸಿದರು.
ಕಳೆದ ಒಂದು ವಾರದಿಂದ ಹಾರೈಕೆ ಮಾಡಿದ ವೈದ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಕಾರ್ಯಕರ್ತೆ ಹೇಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವ ಅಧಿಕಾರಿಗಳು ದತ್ತು ಪಡೆಯಲು ಅರ್ಜಿ ಸಲ್ಲಿಸಿರುವ ಪೋಷಕರಿಗೆ ಈ ಮಗುವನ್ನು ಹಸ್ತಾಂತರ ಮಾಡಲಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…