ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.

ಹಾಡೋನಹಳ್ಳಿಯ ಖಾಸಗಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು. ಹುಡುಕಾಟ ನಡೆಸಿದ್ದು ಸುಮಾರು 5 ದಿನಗಳ ಮಗುವನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದರು.

ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದು, ನಗರದ ತಾಯಿ-ಮಗು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ನಿತ್ರಾಣವಾಗಿದ್ದ ಮಗುವಿಗೆ ಸೂಕ್ತ ಆರೈಕೆ, ಚಿಕಿತ್ಸೆ ನೀಡಿದ ಸರ್ಕಾರಿ ತಾಯಿ ಮಗು ಆಸ್ಪತ್ರೆ ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ಮಗುವಿನ ಜೀವ ಉಳಿಸಿದ್ದಾರೆ.

ನವಜಾತ ಗಂಡು ಮಗು 1 ಕೆ.ಜಿ 800 ಗ್ರಾಂ ತೂಕವಿದ್ದು, ಮಗುವಿನ ಜೀವ ಉಳಿಸುವುದು ಸವಾಲಿನ ಕಾರ್ಯವಾಗಿತ್ತು. ಆಸ್ಪತ್ರೆಯಲ್ಲಿ ಪ್ರಸೂತಿಯಾಗಿದ್ದ ತಾಯಂದಿರಿಗೆ ಮನವಿ ಮಾಡಿ ಮಗುವಿಗೆ ಹಾಲುಣಿಸಲು ಒಪ್ಪಿಸಿದ್ದು, ಜೊತೆ ಪೌಡ‌ರ್ ಹಾಲನ್ನು ಕೂಡ ಮಗುವಿಗೆ ಕುಡಿಸಲಾಗುತ್ತಿದೆ ಎಂದು ವೈದ್ಯರಾದ ಡಾ.ಸವಿತಾ, ಡಾ.ಗಾಯತ್ರಿ ತಿಳಿಸಿದರು.

ಕಳೆದ ಒಂದು ವಾರದಿಂದ ಹಾರೈಕೆ ಮಾಡಿದ ವೈದ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ದತ್ತು ಕೇಂದ್ರದ ಕಾರ್ಯಕರ್ತೆ ಹೇಮಾ ಅವರಿಗೆ ಹಸ್ತಾಂತರ ಮಾಡಿದ್ದಾರೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವ ಅಧಿಕಾರಿಗಳು ದತ್ತು ಪಡೆಯಲು ಅರ್ಜಿ ಸಲ್ಲಿಸಿರುವ ಪೋಷಕರಿಗೆ ಈ ಮಗುವನ್ನು ಹಸ್ತಾಂತರ ಮಾಡಲಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago