ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿದೆ ಎಂದು ವರದಿಯಾಗಿದೆ.
ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಪೊಲೀಸರು ಸಂಶಯವ್ಯಕ್ತಪಡಿಸಿದ್ದಾರೆ.
ಬಿಹಾರದ ಚಂಪಾರಣ್ ಮೂಲದವರಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು.
ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಓಂ ಪ್ರಕಾಶ್ ಅವರು ಕರ್ನಾಟಕ ಗೃಹರಕ್ಷಕದಳ, ಅಗ್ನಿಶಾಮಕದಳಗಳಲ್ಲಿ ಮಹಾನಿರ್ದೇಶಕರಾಗಿದ್ದ ಅವರು, 2015ರಿಂದ 2017ರವರೆಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನಲ್ಲಿ ನಿವೃತ್ತ DG ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂಪ್ರಕಾಶ್ ಪತ್ನಿ ಪಲ್ಲವಿ ವಶಕ್ಕೆ ಪಡೆದು ಡಿಸಿಪಿ ಸಾ.ರಾ ಫಾತೀಮಾ ಅವರಿಂದ ವಿಚಾರಣೆ ಮಾಡಲಾಗುತ್ತಿದೆ.
ಸದ್ಯ ಓಂಪ್ರಕಾಶ್ ಕೊಲೆಗೆ ಬಳಸಿದ್ದ ಚಾಕು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪತ್ನಿ ಪಲ್ಲವಿಯೇ ಓಂಪ್ರಕಾಶ್ ಜೊತೆ ಜಗಳವಾಡಿ ಚಾಕುವಿನಿಂದ ಚುಚ್ಚಿಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ಓಂಪ್ರಕಾಶ್ ಅವರು ಇತ್ತಿಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪ್ರತಿದಿನ ಪತಿ ಹಾಗು ಪತ್ನಿ ನಡುವೆ ಜಗಳ ನಡೆಯುತ್ತಿತ್ತು, ಪ್ರತಿದಿನ ಮನೆಗೆ ಹೊಯ್ಸಳ ಸಿಬ್ಬಂದಿ ಹೋಗಿ ಸಮಾಧಾನ ಮಾಡಿ ಬರುತ್ತಿದ್ದರು ಎನ್ನಲಾಗಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…