ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ: ಓಂಪ್ರಕಾಶ್ ಪತ್ನಿ‌ ಪಲ್ಲವಿ ವಶಕ್ಕೆ ಪಡೆದು ವಿಚಾರಣೆ

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿದೆ ಎಂದು ವರದಿಯಾಗಿದೆ.

ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಪೊಲೀಸರು ಸಂಶಯವ್ಯಕ್ತಪಡಿಸಿದ್ದಾರೆ.

ಬಿಹಾರದ ಚಂಪಾರಣ್ ಮೂಲದವರಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು.

ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಓಂ ಪ್ರಕಾಶ್ ಅವರು ಕರ್ನಾಟಕ ಗೃಹರಕ್ಷಕದಳ, ಅಗ್ನಿಶಾಮಕದಳಗಳಲ್ಲಿ ಮಹಾನಿರ್ದೇಶಕರಾಗಿದ್ದ ಅವರು, 2015ರಿಂದ 2017ರವರೆಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ಬೆಂಗಳೂರಿನಲ್ಲಿ ನಿವೃತ್ತ DG ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂಪ್ರಕಾಶ್ ಪತ್ನಿ‌ ಪಲ್ಲವಿ ವಶಕ್ಕೆ ಪಡೆದು ಡಿಸಿಪಿ ಸಾ.ರಾ ಫಾತೀಮಾ ಅವರಿಂದ ವಿಚಾರಣೆ ಮಾಡಲಾಗುತ್ತಿದೆ.

ಸದ್ಯ ಓಂಪ್ರಕಾಶ್ ‌ಕೊಲೆಗೆ ಬಳಸಿದ್ದ ಚಾಕು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪತ್ನಿ ಪಲ್ಲವಿಯೇ ಓಂಪ್ರಕಾಶ್ ಜೊತೆ ಜಗಳವಾಡಿ ಚಾಕುವಿನಿಂದ ಚುಚ್ಚಿಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಓಂಪ್ರಕಾಶ್ ಅವರು ಇತ್ತಿಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪ್ರತಿದಿನ ಪತಿ ಹಾಗು ಪತ್ನಿ ನಡುವೆ ಜಗಳ ನಡೆಯುತ್ತಿತ್ತು, ಪ್ರತಿದಿನ ಮನೆಗೆ ಹೊಯ್ಸಳ ಸಿಬ್ಬಂದಿ ಹೋಗಿ ಸಮಾಧಾನ‌ ಮಾಡಿ ಬರುತ್ತಿದ್ದರು ಎನ್ನಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago