ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.
ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.
ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…