ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.
ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.
ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…