ನಿವೃತ್ತ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್‌ನಿಂದ ಬೈಕ್ ರ‌್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ‌ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.

ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ಮೂಲಕ ಗ್ರಾಮಕ್ಕೆ ಕರೆತಂದ ನಂತರ ಗ್ರಾಮದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತಿಸಿದರು.

ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.

ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.

ಮದಗೊಂಡನಹಳ್ಳಿ ನಿವಾಸಿ ಕನಕರಾಜ್ ಮಾತನಾಡಿ ನಮ್ಮೂರಿನ ಹಿರಿಮೆ ಹೆಚ್ಚಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗಿರುವ ನಮ್ಮೂರಿನ ಬಾಲಕನೊಬ್ಬ ದೇಶ ಸೇವೆಗೆ ಆಯ್ಕೆಯಾಗಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ನಮ್ಮೂರಿಗೆ ಹೆಮ್ಮೆಯ ವಿಷಯ ರೈತನ ಮಗ, ಯೋಧನಾಗಿ ಸೇವೆ ಸಲ್ಲಿಸಿದ್ದು ಜೈ ಜವಾನ್ ಜೈ ಕಿಸಾನ್ ಘೋಷಣೆಗೆ ಹಿಡಿದ ಕನ್ನಡಿ ಎಂದರು.

ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

2 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

4 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

20 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

23 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago