ದೇಶ ರಕ್ಷಣೆಗಾಗಿ 23 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತನಾದ ಯೋಧನಿಗೆ ಮದಗೊಂಡನಹಳ್ಳಿ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ಕೋರಲಾಯಿತು.
ಯೋಧನಾಗಿ ಜಮ್ಮು-ಕಾಶ್ಮೀರ_ ಜೈಪುರ್ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ತನ್ನ ಗ್ರಾಮಕ್ಕೆ ಮರಳಿದ ಯೋಧನಿಗೆ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದವರು ಶ್ರೀ ಶಕ್ತಿ ಸಂಘದ ಮಹಿಳೆಯರು, ಶಾಲಾ ಮಕ್ಕಳು ಸ್ನೇಹಿತರು ಸೇರಿ ಕಾಡನೂರು ಕೈಮರದ ಗೇಟ್ನಿಂದ ಬೈಕ್ ರ್ಯಾಲಿ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಿ ಮೆರವಣಿಗೆ ಮೂಲಕ ಊರಿಗೆ ಬರ ಮಾಡಿಕೊಂಡರು.
ತಾನು ವ್ಯಾಸಂಗ ಮಾಡಿದ ಗ್ರಾಮದ ಶಾಲೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಸೈನಿಕ
ಎಂ. ಆರ್. ಶ್ರೀನಿವಾಸ್ ದೇಶ ಬಲಿಷ್ಠವಾಗಬೇಕಾದರೆ
ಸೈನ್ಯ ಬಲಿಷ್ಠವಾಗಿರಬೇಕು ಎಂದು ಹೇಳಿದರು.
ತನ್ನ 23 ವರ್ಷದ ಸೇವಾ ಅನುಭವವನ್ನು ವಿಸ್ತಾರವಾಗಿ ವಿವರಿಸಿದ ಅವರು ಪ್ರತಿಯೊಂದು ಮನೆಯಲ್ಲೂ ಒಬ್ಬೊಬ್ಬ ಯೋಧ ದೇಶ ಸೇವೆಗೆ ದಾವಿಸಬೇಕು ಆಗ ದೇಶ ಬಲಿಷ್ಠವಾಗುತ್ತದೆ ನಾನು ಸೈನಿಕ ವೃತ್ತಿಯಲ್ಲಿದ್ದು ನಿವೃತ್ತನಾಗಿದ್ದು ನನ್ನ ಮಗನನ್ನು ನಾನು ಸೈನಿಕನನ್ನಾಗಿ ಮಾಡಬೇಕು ಎಂಬ ಹಂಬಲ ನನಗಿದೆ ದೇಶ ಸೇವೆಯೇ ಈಶ ಸೇವೆ ಎಂದರು.
ಈ ವೇದಿಕೆಯಲ್ಲಿ ಕೆಸ್ತೂರು ವಿಎಸ್ಎಸ್ಎನ್ ನಿರ್ದೇಶಕರಾದ ಕೆ.ಎಚ್. ಮಾರೆಗೌಡ್ರು,
ನಾರಾಯಣಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ನಂಜೇಗೌಡ, ಹೇಮೇಂದ್ರ, ಮನು ಕುಮಾರ್ಮು, ಕೇಶ್ ನಾಗೇಶ್, ಶಿವ ಕುಮಾರ್, ಚಂದ್ರಶೇಖರ್, ಚೇತನ್ ಹಾಗೂ ಬೋಧಕ, ಬೋಧಕೇತರ ವರ್ಗ, ಅಕ್ಕಪಕ್ಕದ ಗ್ರಾಮದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…